ಕರ್ನಾಟಕ

ನಟ​ ಗೋಲ್ಡನ್​ ಸ್ಟಾರ್​ ಗಣೇಶ್​ ರಿಂದ ದಸರಾ ‘ಯುವ ಸಂಭ್ರಮ’ ಉದ್ಘಾಟನೆ

Pinterest LinkedIn Tumblr


ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಯುವ ಸಂಭ್ರಮಕ್ಕೆ ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅವರು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.

ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗಮಂದಿರಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು ಉದ್ಘಾಟನಾ ಸಮಾರಂಭದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು. ಇಂದಿನಿಂದ ಸೆಪ್ಟೆಂಬರ್​ 26ರವರೆಗೆ ಯುವ ಸಂಭ್ರಮ ನಡೆಯಲಿದೆ. ರಾಜ್ಯದ 250 ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಸಮಾರಂಭದಲ್ಲಿ ಪಾಲ್ಗೊಂಡು ನೃತ್ಯ, ಕಿರುನಾಟಕಗಳನ್ನು ಪ್ರದರ್ಶಿಸಲಿದ್ದಾರೆ.

ಇಂದಿನ ಯುವಸಂಭ್ರಮ ಉದ್ಘಾಟನೆ ಸಮಾರಂದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ, ಶಾಸಕರಾದ ಎಲ್. ನಾಗೇಂದ್ರ, ಸಂದೇಶ್ ನಾಗರಾಜ್, ಜಿಲ್ಲಾಧಿಕಾರಿ ಅಭಿರಾಮ್ ಶಂಕರ್, ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸೇರಿ ಹಲವರು ಭಾಗಿಯಾಗಿದ್ದರು.

Comments are closed.