ಕರ್ನಾಟಕ

ಪ್ರೀತಿ ಒಪ್ಪಿಕೊಳ್ಳದಿದ್ದಕ್ಕೆ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಸಾವು

Pinterest LinkedIn Tumblr


ಚಿಕ್ಕಮಗಳೂರು: ತನ್ನ ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕಾಗಿ ಯುವಕನೊರ್ವ ಚಾಕುವಿನಿಂದ ಇರಿದಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಎನ್.ಆರ್.ಪುರ ತಾಲೂಕಿನ ಬಸಾಪುರ ಗ್ರಾಮದ ಬಿಂದು (23) ಮೃತ ನತದೃಷ್ಟ ಯುವತಿ. ಕಳೆದ ಮೂರು ದಿನಗಳ ಹಿಂದೆ ಜಿಲ್ಲೆಯ ಎನ್​ಆರ್​​ಪುರ ತಾಲೂಕಿನ ಮಹಲ್​ಗೋಡಿನಲ್ಲಿ ಮಿಥುನ್ ಎಂಬ ಯುವಕ ಯುವತಿಗೆ ಚಾಕು ಇರಿದು ನಾಪತ್ತೆಯಾಗಿದ್ದ, ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಯೇ ನೇರವಾಗಿ ನ್ಯಾಯಾಲಯದ ಮುಂದೆ ಹಾಜರಾಗಿದ್ದ. ನಂತರ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು.

ತನ್ನನ್ನು ಪ್ರೀತಿಸುವಂತೆ ಮಿಥುನ್​ ಎಷ್ಟೇ ಕಾಡಿದರೂ ಯುವತಿ ಆತನ ಪ್ರೀತಿಯನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಸೆ.18ರಂದು ಮಹಲ್ಗೋಡಿನ ಬಳಿ ಚಾಕು ಇರಿದು ಪರಾರಿಯಾಗಿದ್ದ. ರಕ್ತದ ಮಡುವಿನಲ್ಲಿ ಬಿದ್ದ ಯುವತಿಯನ್ನು ತಕ್ಷಣಕ್ಕೆ ಚಿಕ್ಕಮಗಳೂರಿನ ಆಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಇಂದು ಮೃತಪಟ್ಟಿದ್ದಾಳೆ.

Comments are closed.