ಕರ್ನಾಟಕ

ಸಿದ್ದರಾಮಯ್ಯರಿಂದ ಕುಮಾರಸ್ವಾಮಿ ಮಾತಿಗೆ ತಿರುಗೇಟು…!

Pinterest LinkedIn Tumblr


ಬೆಂಗಳೂರು: ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅನುಭವವಾಗಿದೆ, ಅದಕ್ಕೆ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದಿದ್ದಾರೆ. ಅಲ್ಲದೇ, ಕಾಂಗ್ರೆಸ್‌ಗೆ ಜೆಡಿಎಸ್‌ ಮೊದಲ ಶತ್ರು, ಬಿಜೆಪಿ ಅಲ್ಲ ಎನ್ನುವ ಮೂಲಕ ಶಾಕಿಂಗ್ ಸ್ಟೇಟ್‌ಮೆಂಟ್ ಕೊಟ್ಟಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಹೆಚ್ಡಿಕೆ ಮಾತಿನ ಏಟಿಗೆ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್‌ ಬೆಂಬಲದಿಂದ ಕುಮಾರಸ್ವಾಮಿಯವರು ಸಿಎಂ ಆಗಿದ್ರಲ್ಲ, ಅದಕ್ಕೆ ಹಾಗೆ ಹೇಳಿರಬಹುದು ಎಂದಿದ್ದಾರೆ.

ಇನ್ನು ಉಪಚುನಾವಣೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಉಪಚುನಾವಣೆ ಇದೇ ವರ್ಷ ಬರತ್ತೆ ಎಂಬ ಭರವಸೆ ಇತ್ತು. ಆದ್ರೆ ಇಷ್ಟು ಬೇಗ ಬರತ್ತೆ ಅಂತಾ ಅಂದುಕೊಂಡಿರಲಿಲ್ಲ, ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಚುನಾವಣೆ ಬರಬಹುದು ಎಂದುಕೊಂಡಿದ್ವಿ. ಅಕ್ಟೋಬರ್‌ನಲ್ಲೇ ಚುನಾವಣೆ ಆಗತ್ತೆ ಅಂತಾ ಅಂದುಕೊಂಡಿರಲಿಲ್ಲ ಎಂದಿದ್ದಾರೆ.

ಅಲ್ಲದೇ, ಚುನಾವಣೆಗೆ ನಾವು ತಯಾರಾಗಿದ್ದೇವೆ. ದೋಸ್ತಿ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ. ನಾವು ಕೂಡ ಹೈಕಮಾಂಡ್‌ಗೆ ನಮ್ಮ ಅಭಿಪ್ರಾಯ ತಿಳಿಸುತ್ತೇವೆ ಎಂದು ಸಿದ್ದರಾಮ್ಯ ಹೇಳಿದ್ದಾರೆ.

Comments are closed.