ಬಳ್ಳಾರಿ: ಚಿತ್ರದುರ್ಗ ಜಿಲ್ಲೆಯ ರಾಂಪುರದತ್ತ ಸಂಚರಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಸಂಡೂರು ತಾಲೂಕಿನ ಗೊಲ್ಲಲಿಂಗಮ್ಮನಹಳ್ಳಿ ಗ್ರಾಮದ ನಿವಾಸಿ ರತ್ನಮ್ಮ ಮಗುವಿಗೆ ಜನ್ಮ ನೀಡಿದ ಮಹಿಳೆ. ರಾಂಪುರದತ್ತ ಬಸ್ ಸಂಚರಿಸುತ್ತಿದ್ದಾಗ ತುಂಬು ಗರ್ಭಿಣಿಯಾಗಿದ್ದ ರತ್ನಮ್ಮ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಬಸ್ಸಿನಲ್ಲಿದ್ದ ಮಹಿಳಾ ಪ್ರಯಾಣಿಕರು ಸೀಟಿನ ಸುತ್ತಲೂ ಸೀರೆಯೊಂದನ್ನು ಕಟ್ಟಿ, ಬಸ್ಸಿನಲ್ಲೇ ಹೆರಿಗೆ ಮಾಡಿಸಿದ್ದಾರೆ.
ತಾಯಿ, ಮಗು ಆರೋಗ್ಯವಾಗಿದ್ದು, ಬಸ್ಸಿನ ಚಾಲಕ ಹಾಗೂ ನಿರ್ವಾಹಕರು ರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಾಯಿ ಮತ್ತು ಮಗುವನ್ನು ದಾಖಲಿಸಿದ್ದಾರೆ.
Comments are closed.