ಕರ್ನಾಟಕ

ಭೀಮಾ ತೀರದ ಹಂತಕ ಭಾಗಪ್ಪ ಹರಿಜನ‌ ಹೆಂಡತಿ ರಸ್ತೆ ಅಪಘಾತದಲ್ಲಿ ಸಾವು

Pinterest LinkedIn Tumblr


ವಿಜಯಪುರ : ವಿಜಯಪುರ ‌ಜಿಲ್ಲೆ ಇಂಡಿ ತಾಲೂಕಿನ ಕಪನಿಂಬರಗಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭೀಮಾ ತೀರದ‌ ಹಂತಕ ಭಾಗಪ್ಪ ಹರಿಜನ ಪತ್ನಿ ಶೋಭಾ ಭಜಂತ್ರಿ ಸಾವನ್ನಪ್ಪಿದ್ದಾರೆ.

ಮಂಗಳವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 13ರ ಕಪನಿಂಬರಗಿ ಬಳಿ ಮಹೀಂದ್ರಾ ಏಕ್ಸ್ ಯುವಿ ಹಾಗೂ ಗೂಡ್ಸ್ ವಾಹನದ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಬಾಗಪ್ಪ ಹರಿಜನ ಪತ್ನಿ ಶೋಭಾ ಭಜಂತ್ರಿ (45) ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಘಟನೆಯಲ್ಲಿ ಎರಡೂ ವಾಹನ ಚಾಲಕರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಶೋಭಾ ಭಜಂತ್ರಿ ಚಿಕ್ಕೋಡಿಯ ಪ್ರಧಾನ ನ್ಯಾಯಾಲದಲ್ಲಿ ಎಪಿಪಿ ಆಗಿದ್ದು, ಶೋಭಾ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹೊರ್ತಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪತ್ನಿ ಮೃತಪಟ್ಟ ಸುದ್ದಿ ತಿಳಿಯುತ್ತಲೇ ಭಾಗಪ್ಪ ಹರಿಜನ ಹಾಗೂ ಆತನ ಸಹಚರರು ಅಸ್ಪತ್ರೆಗೆ ಧಾವಿಸಿದ್ದಾರೆ.

ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.