ಕರ್ನಾಟಕ

ಟಿಎಸ್​ಆರ್​ಟಿಸಿ ಸಿಬ್ಬಂದಿ ಮುಷ್ಕರ ಹಿನ್ನೆಲೆ : ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್​ ಸೇವೆ

Pinterest LinkedIn Tumblr

ಬೆಂಗಳೂರು: ನಾಳೆ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್​ಗಳ ಸೇವೆ ಕಲ್ಪಿಸಿದೆ.

ತೆಲಂಗಾಣ ಸಾರಿಗೆ ನೌಕರರ ಮುಷ್ಕರದಿಂದಾಗಿ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ತೆಲಂಗಾಣ ಸಾರಿಗೆ ಬಸ್​ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಆದರೆ ಕೆಎಸ್‌ಆರ್‌ಟಿಸಿ ಬಸ್​ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಭಯ ರಾಜ್ಯಗಳ ನಡುವೆ ನಾಳೆ ಕೆಎಸ್‌ಆರ್‌ಟಿಸಿ ಬಸ್​ಗಳು‌ ಎಂದಿನಂತೆ ಸಂಚರಿಸಲಿದ್ದು, ವಾರಾಂತ್ಯವಾದ ಕಾರಣ ಹೆಚ್ಚಿನ ಜನರು ಸಂಚಾರ ಮಾಡಲಿದ್ದಾರೆ. ಹಾಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ವಿಶೇಷ ಬಸ್​ಗಳನ್ನು ಬಿಡಲಾಗುತ್ತಿದೆ ಎಂದು ಸಾರಿಗೆ‌ ನಿಗಮದ‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಷ್ಕರ ಮುಗಿಯುವವರೆಗೂ ಯಾವುದೇ ಷರತ್ತಿಲ್ಲದೇ ಕರ್ನಾಟಕ ಹಾಗು ತೆಲಂಗಾಣ ರಾಜ್ಯದ ನಡುವಿನ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್​ಗಳ ಸಂಚಾರ ಮಾಡಲಿದ್ದಾರೆ.

Comments are closed.