ಕರ್ನಾಟಕ

ಯಾವುದೇ ಭಯವಿಲ್ಲದೇ ದಸರಾ ನೋಡಲು ಬನ್ನಿ: ವಿ. ಸೋಮಣ್ಣ

Pinterest LinkedIn Tumblr


ಮೈಸೂರು: ಶ್ರೀರಂಗಪಟ್ಟಣದಲ್ಲಿ ಶಂಕಿತರ ಬಂಧನದಂತಹ ಯಾವುದೇ ಘಟನೆಗಳು ನಡೆದಿಲ್ಲ ಎಂದು ಮೈಸೂರಿನ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ ಈ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಮೈಸೂರು ದಸರಾ ಸಂದರ್ಭ ಶಂಕಿತ ಉಗ್ರರು ರಾಜ್ಯಕ್ಕೆ ಪ್ರವೇಶಿಸಿದ್ದು ಶ್ರೀರಂಗಪಟ್ಟಣದಲ್ಲಿ ಕೆಲವು ಶಂಕಿತರನ್ನು ಬಂಧಿಸಲಾಗಿದೆ ಎಂಬ ವಿಚಾರ ಜಿಲ್ಲೆಯಾದ್ಯಂತ ಹಬ್ಬಿದ್ದು ಇದರಿಂದ ಮೈಸೂರು ದಸರಾಕ್ಕೆ ಆಗಮಿಸುವ ಜನರಲ್ಲಿ ಆತಂಕ ಮನೆಮಾಡಿತ್ತು ಇದಕ್ಕೆಲ್ಲಾ ತೆರೆಎಳೆಯಲು ಸಚಿವ ವಿ. ಸೋಮಣ್ಣ ಸುದ್ದಿಗೋಷ್ಠಿ ನಡೆಸಿ ಯಾವುದೇ ರೀತಿಯ ಶಂಕಿತರ ಬಂಧನ ಆಗಲಿಲ್ಲ ಇದು ಕೇವಲ ವದಂತಿ ಅಷ್ಟೇ ನಾನು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಯಾರು ಕೂಡ ಭಯ ಪಡುವ ಅಗತ್ಯವಿಲ್ಲ, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸುತ್ತೇವೆ. ಪೊಲೀಸರು ಜಾಗರೂಕರಾಗಿ ಕೆಲಸ ಮಾಡುತ್ತಿದ್ದಾರೆ.

ಎಲ್ಲರೂ ನಿರ್ಭೀತಿಯಿಂದ ದಸರಾ ನೋಡಲು ಬನ್ನಿ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ವಿ. ಸೋಮಣ್ಣ ತಿಳಿಸಿದರು.

Comments are closed.