ಕರ್ನಾಟಕ

ಅ.23 : ಬಾಳೆಹೊನ್ನೂರು ಸೇತುವೆ ಮೇಲೆ ವಾಹನ ಸಂಚಾರ ಬಂದ್

Pinterest LinkedIn Tumblr

ಚಿಕ್ಕಮಗಳೂರು : ಶೃಂಗೇರಿ, ಹೊರನಾಡು ಮತ್ತು ಕಳಸದಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಿ ಡಿ.ಸಿ. ಬಗಾದಿ ಗೌತಮ್ ಸೂಚನೆ ಕೊಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸೇತುವೆ ಕುಸಿಯುವ ಹಂತದಲ್ಲಿರುವುದರಿಂದ ವಾಹನ ಸಂಚಾರಕ್ಕೆ ಸುಮಾರು 3 ಗಂಟೆಗಳ ಕಾಲ ನಿರ್ಬಂಧ ಹಾಕಲಾಗಿದೆ. ಅಕ್ಟೋಬರ್ 23 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಸೇತುವೆ ಮೇಲೆ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ.

ಬಾಳೆಹೊನ್ನೂರು ಸೇತುವೆ ಕುಸಿಯೋ ಹಂತದಲ್ಲಿರುವುದರಿಂದ ಅಧಿಕಾರಿಗಳು ವೀಕ್ಷಣೆ ಮಾಡಲಿದ್ದಾರೆ. ಬ್ರಿಡ್ಜ್ ಟೆಸ್ಟಿಂಗ್ ಮೆಷಿನ್ ಬಳಸಿ ಪರಿವೀಕ್ಷಣೆ ನಡೆಸಲಿದ್ದಾರೆ. ಈ ವೇಳೆ ವಾಹನ ಸವಾರರಿಗೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಡಿ.ಸಿ. ಆದೇಶ ಹೊರಡಿಸಿದ್ದಾರೆ.

Comments are closed.