ಕರ್ನಾಟಕ

ಜಿಲ್ಲಾಧಿಕಾರಿಗಳ ಜೊತೆಗಿನ ವಿಡಿಯೋ ಸಂವಾದ ಮೊಟಕು: ಯಡಿಯೂರಪ್ಪ ವಿರುದ್ಧ ಆಕ್ರೋಶ

Pinterest LinkedIn Tumblr


ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಏರ್ಪಡಿಸಲಾಗಿದ್ದ ವಿಡಿಯೋ ಸಂವಾದವನ್ನು ಅರ್ಧಕ್ಕೆ ಮೊಟಕುಗೊಳಿಸಿ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ ನಡೆಗೆ ತೀವ್ರ ಆಕ್ರೊಶ ವ್ಯಕ್ತವಾಗಿದೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಯೋಜಿಸಿದ್ದ ವಿಡಿಯೋ ಸಂವಾದವನ್ನು ಕೇವಲ ಎರಡು ನಿಮಿಷಕ್ಕೆ ಸೀಮಿತಗೊಳಿಸಿ ಕಾನ್ಫರೆನ್ಸ್ ಹಾಲ್ ನಿಂದ ಬಿಜೆಪಿ ಕಚೇರಿಗೆ ದೌಡಾಯಿಸಿದ್ದಾರೆ.

ಪ್ರವಾಹ ಪರಿಸ್ಥಿತಿಯನ್ನು ಸಮರ್ಥ ವಾಗಿ ನಿಭಾಯಿಸುವಂತೆ ಜಿಲ್ಲಾಧಿಕಾರಿಗಳಿಗೆ ಎರಡು- ಮೂರು ನಿಮಿಷದಲ್ಲಿ ಸಲಹೆ ಕೊಟ್ಟು , ಬಿಜೆಪಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲು ತೆರಳಿದ್ದಾರೆ.

ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ತಲೆದೋರಿದ್ದರೂ ಸಮರ್ಪಕವಾಗಿ ಪರಿಹಾರ ಸೂಚಿಸದೆ ತೆರಳಿದ ಸಿಎಂ ನಡೆ ಇದೀಗ ಚರ್ಚೆಗೆ ಗ್ರಾಸವಾಗಿದೆ.

Comments are closed.