ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು – ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತ್ಯು.

Pinterest LinkedIn Tumblr

ಮೂಡಿಗೆರೆ: ಸೇತುವೆ ಮೇಲೆ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಇಲ್ಲಿ ಸಂಭವಿಸಿದೆ.

ಹೆಬ್ಬಾಳದ ಯಶೋಧ (81) ಪ್ರಕಾಶ್​(61) ಹಾಗೂ ಅನಿರುದ್ಧ್ (24)ಮೃತಪಟ್ಟವರು. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಳಿಯ ನೀರುಗಂಡಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಯಶೋಧ ಕುಟುಂಬದವರು ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಕ್ಕೆ ತೆರಳಿದ್ದರು. ಕೊಟ್ಟಿಗೆಹಾರ ರಸ್ತೆಯಲ್ಲಿ ಕಾರು ಸಂಚರಿಸುತ್ತಿದ್ದ ವೇಳೆ ನೀರುಗಂಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿತ್ತು. ಹಳ್ಳದಲ್ಲಿ ನೀರು ರಭಸವಾಗಿ ಹರಿಯುತ್ತಿದ್ದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದವರನ್ನು ರಕ್ಷಿಸಲು ತೊಂದರೆಯಾಯಿತು ಎಂದು ತಿಳಿದು ಬಂದಿದೆ. ಬಣಕಲ್​ ಠಾಣೆಯಲ್ಲಿ ದೂರು ದಾಖಲಾಗಿದೆ.

Comments are closed.