ಬೀದರ: ಅನರ್ಹಗೊಂಡ ಶಾಸಕರು ಬಿಜೆಪಿ ಪಕ್ಷದ ಸದಸ್ಯರಲ್ಲ, ಹಾಗಾಗಿ ಅವರ ವಿಷಯದಲ್ಲಿ ನಾವು ಮಾತನಾಡುವ ಪ್ರಶ್ನೆಯೇ ಇಲ್ಲ ಎಂದು ಸಂಸದ ಭಗವಂತ ಖೂಬಾ ಹೇಳುವ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜತೆಗೆ ಮಾತನಾಡಿದ ಅವರು, ಅನರ್ಹ ಶಾಸಕರು ವಿವಿಧ ಪಕ್ಷಗಳಿಂದ ತಮ್ಮ ಅತೃಪ್ತಿ ಹೊರಹಾಕಿ ರಾಜೀನಾಮೆ ಕೊಟ್ಟಿದ್ದಾರೆ. ಈ ಕ್ಷಣದ ಹೊರೆಗೂ ಅನರ್ಹ ಶಾಸಕರು ನಮ್ಮ ಪಕ್ಷದ ಸದಸ್ಯರಲ್ಲ. ಕೋರ್ಟ್ ತೀರ್ಪಿನ ಬಳಿಕ ಆ ಶಾಸಕರು ಬಿಜೆಪಿಗೆ ಸೇರಿದರೆ ಮತ್ತು ಪಕ್ಷ ಅವರಿಗೆ ಟಿಕೆಟ್ ನೀಡಿದ ಮೇಲಷ್ಟೇ ನಾವು ಅವರ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ತಿಳಿಸಿದರು.
ಮಾಜಿ ಸಚಿವ ಡಿ.ಕೆ ಶಿವಕುಮಾರ ಎಂಟ್ರಿಯಿಂದ ಉಪ ಚುನಾವಣೆಯಲ್ಲಿ ಬಿಜೆಪಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಖೂಬಾ ಹೇಳಿದರು.
Comments are closed.