ಕರ್ನಾಟಕ

ನಾನು ಹುಟ್ಟು ಕಾಂಗ್ರೆಸ್ ವ್ಯಕ್ತಿ: ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ

Pinterest LinkedIn Tumblr


ಬೆಂಗಳೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ನ್ಯಾಯಾಂಗ ಬಂಧನದ ನಂತರ ದೆಹಲಿಯಿಂದ ಬೆಂಗಳೂರಿಗೆ ಬಂದಾಗ ಮೆರವಣಿಗೆಯಲ್ಲಿ ಜೆಡಿಎಸ್ ಬಾವುಟ ಹಿಡಿದಿರುವುದಕ್ಕೆ ಸಿದ್ದರಾಮಯ್ಯ ಗರಂ ಆಗಿದ್ದಾರೆ ಎಂಬ ವಿಚಾರ ಈಗ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಡಿ ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ನಾನು ಬೆಂಗಳೂರಿಗೆ ಬಂದ ದಿನ ಕನ್ನಡ ಬಾವುಟ ಸೇರಿದಂತೆ ಹಲವು ಬಾವುಟಗಳನ್ನು ಕೊಟ್ಟಿದ್ದಾರೆ. ಅದನ್ನು ನಾನು ಹಿಡಿದುಕೊಂಡಿದ್ದೇನೆ. ಸಿದ್ದರಾಮಯ್ಯ ನಮ್ಮ ಹಿರಿಯ ನಾಯಕರು ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಿದ್ದರಾಮಯ್ಯ ನನ್ನ ವೆಲ್ ವಿಷರ್ .ಅವರು ಆ ರೀತಿ ಮಾತನಾಡಿಲ್ಲ ಎಂದು ಅನ್ನಿಸುತ್ತೆ. ಮಿಸ್ಟೇಕ್ ಮಾಡಿಕೊಂಡಿರಬೇಕು. ಸಿದ್ದರಾಮಯ್ಯ ಗೆ ನನ್ನ ಮೇಲೆ ಲವ್ ಇದೆ ಎಂದ ಡಿಕೆಶಿ ನಾನು ಹುಟ್ಟುತ್ತಾ ಕಾಂಗ್ರೆಸ್ ಮ್ಯಾನ್. ಹಾಗಾಗಿ ದೆಹಲಿಯಿಂದ ನೇರವಾಗಿ ಕಾಂಗ್ರೆಸ್ ಕಚೇರಿಗೆ ಬಂದೆ ಎಂದರು.

ಮುಂದುವರಿದ ಮಾತನಾಡಿದ ಡಿಕೆಶಿ, ಈಗಲೂ ಜೆಡಿಎಸ್ ಶಾಸಕರು ಬಂದಿದ್ದಾರೆ. ಬರಬೇಡಿ ಅಂತ ನಾನು ಹೇಳುವುದಕ್ಕೆ ಆಗುವುದಿಲ್ಲ ಎಂದಿದ್ದಾರೆ.

Comments are closed.