ಕರ್ನಾಟಕ

ನವೆಂಬರ್ 6ರ ಬಳಿಕ ಮತ್ತೆ ವರುಣನ ಆರ್ಭಟ : ಹವಾಮಾನ ಇಲಾಖೆಯಿಂದ ಶಾಕಿಂಗ್ ನ್ಯೂಸ್

Pinterest LinkedIn Tumblr

ಮಳೆಯಿಂದ ಈಗಾಗಲೇ ತತ್ತರಿಸಿ ಹೋಗಿರುವ ರಾಜ್ಯದ ಜನತೆಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ನವೆಂಬರ್ 6ರ ಬಳಿಕ ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕ್ಯಾರ್ ಹಾಗೂ ಮಹಾ ಚಂಡಮಾರುತದ ಅಬ್ಬರ ಕಡಿಮೆಯಾಗಿದ್ದರೂ ಸಹ ಶ್ರೀಲಂಕಾದ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂದಿನ ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ ಎಂದು ಹೇಳಲಾಗಿದೆ.

ಇದರ ಜೊತೆಗೆ ಮಹಾ ಚಂಡಮಾರುತ ಮತ್ತೆ ವಾಪಸ್ ಗುಜರಾತ್ ಹಾಗು ಮಹಾರಾಷ್ಟ್ರದ ಕಡೆ ಬರಲಿರುವುದರಿಂದ ಈ ರಾಜ್ಯಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

Comments are closed.