ಕರ್ನಾಟಕ

ಉಪಚುನಾವಣೆ; ಶಿವಾಜಿನಗರಕ್ಕೆ ಎಂ.ಶರವಣ ಬಿಜೆಪಿ ಅಭ್ಯರ್ಥಿ

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ 5ರಂದು ನಡೆಯಲಿರುವ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷ ಗುರುವಾರ 13 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇದೀಗ ಶಿವಾಜಿನಗರ ಕ್ಷೇತ್ರಕ್ಕೆ ಎಂ.ಶರವಣ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಿಸಿದೆ. ಅನರ್ಹ ಶಾಸಕ ಬೇಗ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದಂತಾಗಿದೆ.

ಶಿವಾಜಿನಗರ ಕ್ಷೇತ್ರದಲ್ಲಿ ರೋಷನ್ ಬೇಗ್ ಕುರಿತು ಬಿಜೆಪಿ ಮೌನ ವಹಿಸಿದ್ದು, ಅಭ್ಯರ್ಥಿ ಯಾರು ಎಂಬ ಕುತೂಹಲ ಮೂಡಿಸಿತ್ತು. ಆ ಹಿನ್ನೆಲೆಯಲ್ಲಿ ಇದೀಗ ಕುತೂಹಲಕ್ಕೆ ತೆರೆ ಬಿದ್ದಂತಾಗಿದೆ.

ಬಿಬಿಎಂಪಿಯ ಮಾಜಿ ಕಾರ್ಪೋರೇಟರ್ ಎಂ.ಶರವಣ ಅವರನ್ನು ಶಿವಾಜಿನಗರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಏತನ್ಮಧ್ಯೆ ರಾಣೇಬೆನ್ನೂರು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ. ಅನರ್ಹ ಶಾಸಕ ಶಂಕರ್ ರಾಣೇಬೆನ್ನೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಶಂಕರ್ ಅವರನ್ನು ಎಂಎಲ್ ಸಿ ಮಾಡಲಾಗುತ್ತದೆ ಎಂಬ ಊಹಾಪೋಹ ಹರಿದಾಡುತ್ತಿದೆ.

Comments are closed.