ಕರ್ನಾಟಕ

ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ: ಫೇಸ್‍ಬುಕ್ ಲೈವಿನಲ್ಲಿ ತಂದೆಯ ಆರೋಪಕ್ಕೆ ನಿತ್ಯಾನಂದನ ಆಶ್ರಮದಲ್ಲಿದ್ದ ಮಗಳಿಂದ ಪ್ರತಿಕ್ರಿಯೆ

Pinterest LinkedIn Tumblr


ಬೆಂಗಳೂರು: ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ.

ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಾಗಿದೆ. ಆದರೆ ಸ್ವಾಮೀಜಿ ನಮಗೆ ತಂದೆ ಸಮಾನರು, ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ವಿಡಿಯೋದಲ್ಲಿ ತನ್ನ ಹೆಸರನ್ನು ಮಾ ನಿತ್ಯ ತತ್ವಪ್ರಿಯ ಆನಂದ ಎಂದು ಹೇಳಿಕೊಂಡಿದ್ದಾಳೆ.

ನನ್ನನ್ನು ಯಾರೂ ಅಪಹರಿಸಿಲ್ಲ. ನನ್ನ ವೈಯಕ್ತಿಕ ಕಾರಣ, ಕುಟುಂಬದಲ್ಲಿ ವೈಮನಸ್ಸು ಇರುವುದರಿಂದ ಹೆತ್ತವರ ಜೊತೆ ಇರಲಾರದೆ ಆಶ್ರಮದಲ್ಲಿದ್ದೇನೆ. ನಾನು ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಇದು ನನ್ನ ಬದುಕು, ನಾನು ಇಚ್ಛೆ ಪಟ್ಟು ಈ ಬದುಕನ್ನು ಬದುಕುತ್ತಿದ್ದೇನೆ ಎಂದು ತಿಳಿಸಿದ್ದಾಳೆ.

ಸ್ವಾಮೀಜಿಯ ಮೇಲೆ ವೈಯಕ್ತಿಕ ಕಾರಣಗಳಿಂದ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅವರು ಆರೋಪಿಸಿರುವುದು ಸುಳ್ಳು, ದೂರಿನಲ್ಲಿ ಉಲ್ಲೇಖಿಸಿರುವುದು ಸಹ ಸುಳ್ಳು. ನಮ್ಮನ್ನು ಸ್ವಾಮೀಜಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಹಾಗೂ ನನ್ನ ಸಹೋದರಿ ಜೊತೆಗೆ ಇದ್ದೇವೆ. ಹೆತ್ತವರು ಖಾವಿ ಬಿಟ್ಟು ಬನ್ನಿ ಅಂತಿದ್ದಾರೆ. ಆದರೆ ನಾವು ಇದಕ್ಕೆ ತಯಾರಿಲ್ಲ ಎಂದು ಹೇಳಿದ್ದಾಳೆ.

ಪೊಲೀಸರು, ಮಾಧ್ಯಮದವರು ಎಲ್ಲರೂ ನಮಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಸುಖಾಸುಮ್ಮನೆ ಆಶ್ರಮದಲ್ಲಿರುವವರನ್ನು ಬಂಧಿಸುತ್ತಿದ್ದಾರೆ. ಇದು ಕುಟುಂಬದ ಸಮಸ್ಯೆ, ಇದಕ್ಕೂ ಆಶ್ರಮಕ್ಕೂ ಸಂಬಂಧವಿಲ್ಲ. ನನಗೆ ಖಾವಿ ಬಿಟ್ಟು ಬದುಕು ಇಲ್ಲ. ನಿತ್ಯಾನಂದ ಸ್ವಾಮೀಜಿ ನಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ನೈಜ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದದರೂ ಪೊಲೀಸರು ಕೇಳುತ್ತಿಲ್ಲ ಎಂದು ಹೇಳಿದ್ದಾಳೆ.

ಏನಿದು ಪ್ರಕರಣ?
ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಜನಾರ್ದನ ಶರ್ಮಾ ತನ್ನ ಮಕ್ಕಳನ್ನು ನಿತ್ಯಾನಂದನ ಆಶ್ರಮಕ್ಕೆ ಬಿಟ್ಟಿದ್ದರು. ನಿತ್ಯಾನಂದನ ಮಾತಿಗೆ ಮರುಳಾಗಿ ತನ್ನ ನಾಲ್ವರು ಮಕ್ಕಳನ್ನು ಆಶ್ರಮದಲ್ಲಿ ಇಟ್ಟಿದ್ದರು. ಆಶ್ರಮದಲ್ಲಿನ ಅಕ್ರಮಗಳ ಬಗ್ಗೆ ತಿಳಿದು ಶರ್ಮಾ ಆಶ್ರಮದ ಕೆಲಸ ಬಿಟ್ಟು ಹೊರಗೆ ಬಂದಿದ್ದರು.

ಬಟ್ಟು ಬರುವ ವೇಳೆ ನಾಲ್ವರು ಮಕ್ಕಳ ಪೈಕಿ 18 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಶರ್ಮಾ ಆರೋಪಿಸಿದ್ದರು. ಇವಳನ್ನು ಅಪಹರಿಸಿ, ನಮಗೆ ತಿಳಿಯದಂತೆ ಬಿಡದಿಯ ನಿತ್ಯಾನಂದ ಆಶ್ರಮದಿಂದ ಅಹಮದಾಬಾದ್ ಆಶ್ರಮಕ್ಕೆ ನನ್ನ ಮಕ್ಕಳನ್ನು ಕಳುಹಿಸಲಾಗಿದೆ ಎಂದು ಜನಾರ್ದನ ಶರ್ಮಾ ಆರೋಪಿಸಿದ್ದರು. ಅಲ್ಲದೆ ಮಕ್ಕಳನ್ನು ಹುಡುಕಿಕೊಡುವಂತೆ ಯುವತಿಯ ತಂದೆ ನಿತ್ಯಾನಂದನ ವಿರುದ್ಧ ಗುಜರಾತ್ ನಲ್ಲಿ ದೂರು ದಾಖಲಿಸಿದ್ದಾರೆ.

Comments are closed.