ಕರ್ನಾಟಕ

ಸಿದ್ದರಾಮಯ್ಯ ರಾಜಕೀಯ ನಿವೃತ್ತಿ?

Pinterest LinkedIn Tumblr


ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಹಾಗೂ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ರಾಜಕೀಯ ನಿವೃತ್ತಿಯ ಬಗ್ಗೆಯೂ ಮಾತನಾಡುತ್ತಿದ್ದಾರೆ.

ಆದರೆ ಸಿದ್ದರಾಮಯ್ಯನವರ ಬಾಯಲ್ಲಿ ರಾಜಕೀಯ ನಿವೃತ್ತಿಯ ಮಾತು ಕೇಳುತ್ತಿದ್ಂತೆ ಕಾಂಗ್ರೆಸ್​ನ ಹಾಲಿ, ಮಾಜಿ ಶಾಸಕರು, ಮುಖಂಡರು ಅವರ ನಿವಾಸಕ್ಕೆ ತೆರಳುತ್ತಿದ್ದಾರೆ. ಸಿದ್ದರಾಮಯ್ಯನವರ ಕಾವೇರಿ ನಿವಾಸದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಲಕ್ಷ್ಮೀ ಹೆಬ್ಬಾಳ್ಕರ್​, ರಮೇಶ್ ಕುಮಾರ್, ಎಚ್.ಕೆ.ಪಾಟೀಲ್, ಐವನ್ ಡಿಸೋಜ, ಪ್ರಕಾಶ್ ರಾಠೋಡ್, ಜಯಮಾಲಾ, ವಿ.ಎಸ್. ಉಗ್ರಪ್ಪ ಈಗಾಗಲೇ ಸಿದ್ದರಾಮಯ್ಯನವರ ನಿವಾಸಕ್ಕೆ ದೌಡಾಯಿಸಿದ್ದು ರಾಜಕೀಯ ನಿವೃತ್ತಿ ಪಡೆಯದಂತೆ ಮನವಿ ಮಾಡಿದ್ದಾರೆ. ಅಲ್ಲದೆ ರಾಜೀನಾಮೆಯನ್ನೂ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವೆ ಜಯಮಾಲಾ, ಸಿದ್ದರಾಮಯ್ಯ ಕಾಂಗ್ರೆಸ್​ ಶಕ್ತಿ. ಅವರ ರಾಜೀನಾಮೆ ನಿರ್ಧಾರವನ್ನು ನಾವು ಪ್ರಶ್ನಿಸಲಾಗುವುದಿಲ್ಲ. ನಮ್ಮ ಹೈಕಮಾಂಡ್​ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಕಾದು ನೋಡಬೇಕು.

ಸಿದ್ದರಾಮಯ್ಯನವರು ತಮ್ಮ ನಿರ್ಧಾರಕ್ಕೆ ಬದ್ಧವಾಗಿದ್ದಾರೆ. ಆದರೆ ಹೈಕಮಾಂಡ್​ ಅವರ ಮನವೊಲಿಸುತ್ತದೆ ಎಂಬ ನಂಬಿಕೆ ನಮಗೆಲ್ಲ ಇದೆ ಎಂದು ಹೇಳಿದರು.

ನಾವೆಲ್ಲ ಸೇರಿ ಚುನಾವಣೆ ಮಾಡಿದ್ದೇವೆ. ಈ ಸೋಲಿಗೆ ನಾವೆಲ್ಲರೂ ಜವಾಬ್ದಾರರು. ಚುನಾವಣೆಯಲ್ಲಿ ಹಿನ್ನಡೆಯಾದಾಗ ಬೇಸರವಾಗುವುದು ಸಹಜ. ಸಿದ್ದರಾಮಯ್ಯ ನಮ್ಮ ನಾಯಕರು. ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಯಾಕೆ ಹಿನ್ನಡೆ ಆಗಿದೆ ಎಂದು ಈಗಲ್ಲ, ಮುಂದೆ ಹೇಳುತ್ತೇವೆ ಎಂದು ಚಲುವರಾಯಸ್ವಾಮಿ ತಿಳಿಸಿದರು.

Comments are closed.