
ಮಡಿಕೇರಿ: ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಿ, ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಿಂದ ಪ್ರತಾಪ್ ಸಿಂಹ ಗೆಲ್ಲಬೇಕು ಎಂದು ಹರಕೆ ಹೊತ್ತಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಕೊಡಗಿನಿಂದ ಶಬರಿಮಲೆಗೆ ಕಾಲ್ನಡಿಗೆ ಜಾಥಾ ಹೋಗುತ್ತಿದ್ದಾರೆ.
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಗುಡ್ಡೆಹೊಸೂರು ಸಮೀಪದ ಬಳ್ಳೂರಿನ ಸಲೀ ಮತ್ತು ಪೃಥ್ವಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಕಾಲ್ನಡಿಗೆ ಜಾಥಾ ನಡೆಸುತ್ತಿದ್ದಾರೆ. ಬಳ್ಳೂರಿನಿಂದ ಶಬರಿ ಮಲೆಗೆ 600 ಕಿಲೋ ಮೀಟರ್ ಕಾಲ್ನಡಿಗೆ ಜಾಥಾ ನಡೆಸುತ್ತಿದ್ದು, ಇಂದಿನಿಂದ 25 ದಿನಗಳ ಕಾಲ ಶಬರಿಮಲೆಗೆ ನಡೆಯಲಿದ್ದಾರೆ.
ತಮ್ಮೂರಿನ ಯಾವುದೇ ಮನೆಗಳಿಗೆ ಹಕ್ಕುಪತ್ರವಿಲ್ಲ, ಅವುಗಳನ್ನು ನೀಡುವಂತೆ ಹಲವು ವರ್ಷಗಳಿಂದ ಕೇಳಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ಹೀಗಾಗಿ ಕೇಂದ್ರದಲ್ಲಿ ಮೋದಿಯವರು ಪ್ರಧಾನಿಯಾಗಿ ನಮ್ಮ ಸಮಸ್ಯೆ ಬಗೆಹರಿಸುವರೆಂಬ ನಂಬಿಕೆಯಿಂದ ಹರಕೆ ಹೊತ್ತಿದ್ದೇವು. ಆದರೆ ಇನ್ನೂ ಹಕ್ಕುಪತ್ರ ಸಿಕ್ಕಿಲ್ಲ ಆದರೆ ಸಿಗುತ್ತದೆ ಎಂಬ ನಂಬಿಕೆ ಇದೆ ಎನ್ನುತ್ತಾರೆ ಕಾಲ್ನಡಿಗೆ ಮಾಡುತ್ತಿರುವ ಅಯ್ಯಪ್ಪ ಮಾಲಾಧಾರಿಗಳು.
Comments are closed.