ಕರ್ನಾಟಕ

ಬೆಂಗಳೂರು ಹೊರವಲಯದ ಅತ್ತಿಬೆಲೆಯಲ್ಲಿ 11 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಗೃಹಿಣಿ ಸಾವು

Pinterest LinkedIn Tumblr


ಆನೇಕಲ್: ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ನೆರಳೂರು ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿದೆ.

ಮೃತ ಗೃಹಿಣಿಯನ್ನು ಹೊಸದುರ್ಗ ಮೂಲದ ಲೋಕೇಶ್ವರಿ(29) ಎಂದು ಗುರುತಿಸಲಾಗಿದೆ. ಕಳೆದ 11 ತಿಂಗಳ ಹಿಂದಷ್ಟೇ ಲೋಕೇಶ್ವರಿಯನ್ನು ನವೀನ್ ಕುಮಾರ್ ಎಂಬವನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿ ನೆರಳೂರಿನಲ್ಲಿ ವಾಸಿಸುತ್ತಿದ್ದು, ಶುಕ್ರವಾರ ರಾತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆಯಾಗಿದೆ.

ಮೃತ ಲೋಕೇಶ್ವರಿ ನಿನ್ನೆ ಸಂಜೆ ತನ್ನ ತಾಯಿಯ ಜೊತೆ ಮಾತನಾಡಿದ್ದರು. ಬಳಿಕ ರಾತ್ರಿ 11 ಗಂಟೆಯ ಸುಮಾರಿಗೆ ಪೊಲೀಸರು ಮೃತ ಮಹಿಳೆಯ ಪೋಷಕರಿಗೆ ಮಗಳು ನೇಣು ಹಾಕಿಕೊಂಡು ಮೃತ ಪಟ್ಟಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಮೃತ ಮಹಿಳೆಯ ಪೋಷಕರು ಮಗಳನ್ನು ಕೊಲೆ ಮಾಡಲಾಗಿದೆ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಅತ್ತಿಬೆಲೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ಸಂಬಂಧ ದೂರು ದಾಖಲು ಮಾಡಿಕೊಂಡು ಪತಿ ನವೀನ್ ಕುಮಾರ್ ನನ್ನು ವಶಕ್ಕೆ ಪಡೆದ ಪೋಲಿಸರು ವಿಚಾರಣೆ ನಡೆಸಿದ್ದಾರೆ.

Comments are closed.