ಕರ್ನಾಟಕ

ಪಿಯುಸಿ ವಿದ್ಯಾರ್ಥಿ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ

Pinterest LinkedIn Tumblr


ತುಮಕೂರು: ಕುಣಿಗಲ್ ತಾಲೂಕಿನ ಗಿರಿ ಗೌಡನ ಪಾಳ್ಯದ ಅರವಿಂದ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ.

ವಿದ್ಯಾರ್ಥಿಯನ್ನು ಧ್ರುವ ಕುಮಾರ್ (16) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಸೋಮವಾರ ರಾತ್ರಿ ತನ್ನ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ಸಹಪಾಠಿಗಳು ಆತನನ್ನು ರಕ್ಷಿಸಿ ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಕೂಡಲೇ ವಿದ್ಯಾರ್ಥಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ವಿವಿಧ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾನೆ.

ಪೋಷಕರಿಗೆ ಮಾಹಿತಿ ನೀಡಿ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಪ್ರಥಮ ಪಿಯುಸಿ, ವ್ಯಾಸಂಗ ಮಾಡುತ್ತಿದ್ದ ಈತ ಬೆಂಗಳೂರಿನ ಮತ್ತಿಕೆರೆ ವಾಸಿ ನಾಗರಾಜ್ ಮಗ. ನಾಗರಾಜ್, ಖಾಸಗಿ ಶಿಕ್ಷಕರಾಗಿ ಟ್ಯೂಷನ್ ಮಾಡುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೋಷಕರು ಕುಣಿಗಲ್ ಠಾಣೆಗೆ ದೂರು ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಹೊರ ಬರದ ಕಾರಣ ಹಲವು ವದಂತಿಗಳು ಸಹ ಹುಟ್ಟಿಕೊಂಡಿದೆ.

Comments are closed.