ಕರ್ನಾಟಕ

ಕೊರೊನಾ ವೈರಸ್ ಅಧಿಕವಾದರೆ ಶಾಲಾ-ಕಾಲೇಜುಗಳಿಗೆ ರಜೆ: ಸುರೇಶ್ ಕುಮಾರ್

Pinterest LinkedIn Tumblr


ಬೆಂಗಳೂರು : ವಿಶ್ವಾದ್ಯಂತ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್ ರಾಜ್ಯದಲ್ಲೂ ಆತಂಕ ಸೃಷ್ಟಿಸಿದ್ದು, ಕೊರೊನಾ ಭೀತಿ ತೀರಾ ಹೆಚ್ಚಾದರೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಸ್ ಕುಮಾರ್, ಕೊರೊನಾ ಭೀತಿ ಹೆಚ್ಚಾದರೆ ಶಾಲೆಯಲ್ಲಿ ಹೆಚ್ಚಿನ ಮಕ್ಕಳಿಗೆ ಜ್ವರದಂತಹ ಸಾಂಕ್ರಾಮಿಕ ರೋಗ ಕಾಣಿಸಿಕೊಂಡರೆ, ಅಂತಹ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಾಗಿದೆ. ದೆಹಲಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಜ್ವರ ಕಾಣಿಸಿಕೊಂಡರೆ ರಜೆ ಕೊಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಪರೀಕ್ಷೆಗೆ ಮಾಸ್ಕ್‌ ಹಾಕಿಕೊಳ್ಳಬಹುದು:
ಈಗಾಗಲೇ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಪರೀಕ್ಷೆಗೆ ವಿಸ್ಯಾರ್ಥಿಗಳು ಮಾಸ್ಕ್‌ ಹಾಕಿಕೊಂಡು ಬರಲು ಅವಕಾಶ ನೀಡಲಾಗಿದೆ. ಜತೆಗೆ ಅಗತ್ಯ ಔಷಧಗಳನ್ನು ಪರೀಕ್ಷಾ ಸ್ಥಳಕ್ಕೆ ಕೊಂಡಯ್ಯಬಹುದು ಎಂದು ತಿಳಿಸಿದ್ದಾರೆ.

Comments are closed.