ಕರ್ನಾಟಕ

ಎ.12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ

Pinterest LinkedIn Tumblr


ಬೆಂಗಳೂರು: ಕೊರೊನಾ ಹರಡುವಿಕೆ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದೆ.

ಕೊರೊನಾ ವೈರಸ್ ದೇಶದಲ್ಲಿ ಜಾಸ್ತಿಯಾದ ಕಾರಣ ಈ ಮೊದಲೇ ಶಾಲೆಗಳಿಗೆ ಏಪ್ರಿಲ್ 11ರ ವರೆಗೆ ರಜೆ ಘೋಷಣೆ ಮಾಡಲಾಗಿತ್ತು. ಈಗ ಕೊರೊನಾ ವೈರಸ್ ಹರಡುವಿಕೆ ಹೆಚ್ಚಳವಾದ ಕಾರಣ ಏಪ್ರಿಲ್ 12ರಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ಬೇಸಿಗೆ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಇದರ ಜೊತೆಗೆ ಸುತ್ತೋಲೆಯಲ್ಲಿ ಶಿಕ್ಷಕರಿಗೆ ಕೆಲ ನಿಯಮಗಳನ್ನು ಸೂಚಿಸಿರುವ ಸರ್ಕಾರ, ಶಿಕ್ಷಕರು ಕೇಂದ್ರ ಸ್ಥಾನ ಬಿಡುವಂತಿಲ್ಲ ಹಾಗೂ ಅವರ ತಮ್ಮ ಮೊಬೈಲ್ ನಂಬರ್ ಗಳನ್ನ ಬಿಇಓಗಳಿಗೆ ನೀಡಬೇಕು. ಅಗತ್ಯ ತುರ್ತು ಸೇವೆ ಇದ್ದರೆ ಕರೆ ಮಾಡಿದಾಗ ಬಂದು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸರ್ಕಾರ ಆದೇಶ ನೀಡಿದೆ.

Comments are closed.