ಕರ್ನಾಟಕ

ದಿನವೂ 12,000 ಜನರ ಹೊಟ್ಟೆ ತುಂಬಿಸುತ್ತಿರುವ ಮಾಜಿ ಸಚಿವ ರಾಮಲಿಂಗಾ ರೆಡ್ಡಿ

Pinterest LinkedIn Tumblr


ಬೆಂಗಳೂರು(ಏ.12): ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತ ಇಡೀ ಕರ್ನಾಟಕವನ್ನು ಲಾಕ್ ಡೌನ್ ಮಾಡಲಾಗಿದೆ. ಸದಾ ಗಿಜಿಗಿಜಿಗುಡುವ ಬೆಂಗಳೂರು ಜನ ಮತ್ತು ವಾಹನ ಸಂಚಾರ ಹೊರತುಪಡಿಸಿ ಬಹುತೇಕ ಸ್ತಬ್ದಗೊಂಡಿದೆ. ಸರ್ಕಾರದ ಆದೇಶದ ಮೇರೆಗೆ ಕೆಲ ಅಂಗಡಿ-ಮುಂಗಟ್ಟುಗಳಷ್ಟೇ ಬಾಗಿಲು ತೆರೆದಿವೆ. ರಸ್ತೆ ಬದಿ ಹೋಟೆಲ್​ಗಳೆಲ್ಲವೂ ಬಂದ್ ಆಗಿವೆ. ಬಡವರಿಗೆ ಊಟ ಮಾಡಲು ಅವಕಾಶ ಇದ್ದ ಇಂದಿರಾ ಕ್ಯಾಂಟೀನ್​ಗಳೂ ಮುಚ್ಚಿವೆ. ರಸ್ತೆಬದಿ ಹೋಟೆಲ್​ಗಳನ್ನು ನಂಬಿಕೊಂಡಿದ್ದ ನಿರ್ಗತಿಕರು ಊಟಕ್ಕಾಗಿ ಪರದಾಡುವಂತಾಗಿದೆ. ಇಂಥ ಪರಿಸ್ಥಿತಿಯಲ್ಲಿ ಬಡವರು ಮತ್ತು ನಿರ್ಗತಿಕರ ಸಹಾಯಕ್ಕೆ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮುಂದಾಗಿದ್ದಾರೆ.

ಹೌದು, ಕಾಂಗ್ರೆಸ್​​ ಶಾಸಕ ರಾಮಲಿಂಗಾ ರೆಡ್ಡಿ ಬಡವರು ಮತ್ತು ನಿರ್ಗತಿಕರಿಗೆ ಆಹಾರ ಮತ್ತು ಸಾಮಗ್ರಿ ವಿತರಣೆ ಮಾಡುತ್ತಿದ್ದಾರೆ. ಬೆಂಗಳೂರಿನ ಬಿಟಿಎಂ ಲೇ ಔಟ್ ಕ್ಷೇತ್ರದಲ್ಲಿ ಬಡಜನತೆಗೆ ಅಗತ್ಯ ವಸ್ತುಗಳ ವಿತರಣೆ ಮಾಡಲಾಗುತ್ತಿದೆ.

ರಾಜ್ಯ ಸರ್ಕಾರದ ಸಹಕಾರದೊಂದಿಗೆ ದಾನಿಗಳ ಜೊತೆಗೂಡಿ ಆಹಾರ ತಯಾರಿ ಮಾಡುತ್ತಿದ್ದಾರೆ. ಮಾರ್ಚ್​ 30ರಿಂದ ಬಿಟಿಎಂ ಲೇಔಟ್​​ನ ಕಲ್ಯಾಣ ಮಂಟಪವೊಂದರಲ್ಲಿ ಆಹಾರ ತಯಾರಿಸಿ 12 ಸಾವಿರ ಊಟದ ಪಾಕೆಟ್​​ಗಳನ್ನು ಬರವರಿಗೆ ವಿತರಿಸಲಾಗುತ್ತಿದೆ.

ಕೊರೋನಾದಿಂದ ಬೀದಿಗೆ ಬಂದ ಜನರಿಗೆ ಉಚಿತ ಆಹಾರ ನೀಡಲಾಗುತ್ತಿದೆ. ಇದಕ್ಕೆ ಸ್ಥಳೀಯ ನಾಯಕರ ಮತ್ತು ಸರ್ಕಾರದ ಸಹಾಕರವಿದೆ. ಲಾಕ್​​ಡೌನ್​​ ಮುಗಿದ ಮೇಲೂ ಒಂದಷ್ಟು ದಿನ ಈ ಕಾರ್ಯ ಮುಂದುವರಿಯಲಿದೆ ಎಂದರು ರಾಮಲಿಂಗಾ ರೆಡ್ಡಿ.

ಇಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ಬಡವರಿಗೆ ಸಹಾಯ ಮಾಡುವ ಮೂಲಕ ಹಲವು ರಾಜಕಾರಣಿಗಳಿಗೆ ರಾಮಲಿಂಗಾ ರೆಡ್ಡಿಯವರು ಮಾದರಿಯಾಗಿದ್ದಾರೆ. ಹೀಗೆ ಮಾನವೀಯತೆ ಮೆರೆದ ಇವರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

Comments are closed.