ಕರ್ನಾಟಕ

ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಕರ್ತವ್ಯದಲ್ಲಿದ್ದ ಜಿಲ್ಲಾಸ್ಪತ್ರೆಯ ವೈದ್ಯ ಹೃದಯಾಘಾತದಿಂದ ನಿಧನ

Pinterest LinkedIn Tumblr


ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಕರ್ತವ್ಯದಲ್ಲಿದ್ದ ಜಿಲ್ಲಾಸ್ಪತ್ರೆಯ ವೈದ್ಯರಾದ ಡಾ.ಅನಿಲ್ ಕುಮಾರ್ (52) ತೀವ್ರ ಹೃದಯಾಘಾದಿಂದ ನಿಧನರಾದರು.

ಡಾ.ಅನಿಲ್ ಕುಮಾರ್ ಸುಮಾರು ಎಂಟು ತಿಂಗಳಿಂದ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಒಂದು ವಾರದ ಹಿಂದೆಯಷ್ಟೇ ತುಮಕೂರಿನ ಕೊರಟಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿತ್ತು.

ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಆಗಿ 6 ತಿಂಗಳ ಹಿಂದೆಯಷ್ಟೇ ವರ್ಗಾವಣೆ ಆಗಿದ್ದ ಡಾ. ಅನಿಲ್ ಸರಳ ಸಜ್ಜನಿಕೆ ಸೌಮ್ಯ ಸ್ವಭಾವದಿಂದಲೇ ಎಲ್ಲರ ಮನ ಗೆದ್ದಿದ್ದರು.

ಡಾ. ಅನಿಲ್‌ ಕುಮಾರ್‌ ನಿಧನಕ್ಕೆ ಜಿಲ್ಲಾಡಳಿತ ಸೇರಿದಂತೆ ಸರಕಾರಿ ನೌಕರರು, ಜಿಲ್ಲಾಸ್ಪತ್ರೆ ಸಿಬ್ಬಂದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Comments are closed.