ಬೆಂಗಳೂರು(ಏ. 30): ಮಾಜಿ ಅಂಡರ್ವರ್ಲ್ಡ್ ಡಾನ್ ಮುತ್ತಪ್ಪ ರೈ ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ವರ್ಷದಿಂದ ಕ್ಯಾನ್ಸರ್ನಿಂದ ಬಳಲುತ್ತಿರುವ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ವಿಷಮಗೊಂಡಿತ್ತು. ಸಾವು ನೋವಿನ ಮಧ್ಯೆ ಹೋರಾಡುತ್ತಿರುವ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುತ್ತಪ್ಪ ರೈ ಅವರು ಒಂದು ಕಾಲದಲ್ಲಿ ಭೂಗತ ಲೋಕವನ್ನು ಆಳಿದರಾದರೂ ಹಲವು ವರ್ಷಗಳಿಂದ ಡಾನ್ಗಾರಿಕೆ ತ್ಯಜಿಸಿ ಸಮಾಜ ಸೇವೆಗೆ ಅರ್ಪಿಸಿಕೊಂಡಿದ್ದಾರೆ. ಜಯ ಕರ್ನಾಟಕ ಸಂಘಟನೆ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
2013ರಲ್ಲಿ ಇವರ ಪತ್ನಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. 2018ರಲ್ಲಿ ಇವರಿಗೆ ಕ್ಯಾನ್ಸರ್ ಇರುವುದು ದೃಢಪಟ್ಟಿತ್ತು. ಆಗನಿಂದ ಇವರು ತಮ್ಮ ವಿಲ್ ಪವರ್ನಿಂದಲೇ ಕ್ಯಾನ್ಸರ್ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದಾರೆ. ದೇಹಕ್ಕೆ ಐದು ಬುಲೆಟ್ ಬಿದ್ದರೂ ಹೆದರಿರಲಿಲ್ಲ. ಈಗ ಈ ಕ್ಯಾನ್ಸರ್ಗೆ ಹೆದರುತ್ತೇನೆಯೇ ಎಂದು ಇತ್ತೀಚೆಗೆ ಅವರು ಹೇಳಿದ್ದರು. ಅಂತೆಯೇ, ಅವರು ತಮ್ಮ ಕೊನೆಯ ಉಸಿರುವವರೆಗೂ ಕ್ಯಾನ್ಸರ್ ವಿರುದ್ಧ ಹೋರಾಟ ಮಾಡಿಯೇ ತೀರುತ್ತೇನೆ ಎಂದಿದ್ದರು. ಈಗಲೂ ಅದೇ ಹೋರಾಟದಲ್ಲಿದ್ಧಾರೆ.
Comments are closed.