ಕರ್ನಾಟಕ

ಲಾಕ್​ಡೌನ್​ ನಡುವೆಯೂ ಬೆಂಗಳೂರಲ್ಲಿ ರೌಡಿ ಶೀಟರ್​ ಒಬ್ಬನ ಬರ್ಬರ ಹತ್ಯೆ

Pinterest LinkedIn Tumblr

ಬೆಂಗಳೂರು: ಲಾಕ್​ಡೌನ್​ ನಡುವೆಯೂ ಬೆಂಗಳೂರಲ್ಲಿ ರಕ್ತ ಹರಿದಿದೆ. ರೌಡಿ ಶೀಟರ್​ ಒಬ್ಬನ ಬರ್ಬರ ಹತ್ಯೆ ನಡೆದಿದೆ. ಬುಜ್ಜು ಅಲಿಯಾಸ್ ಬುಜ್ಜಿ ಹತ್ಯೆಯಾದ ರೌಡಿ ಶೀಟರ್. ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಹಿಂದೆ ರೌಡಿ ಡ್ಯಾನಿಯಲ್ ಸಂಬಂಧಿ ಸ್ಟಾಲಿನ್ ಹತ್ಯೆಯಲ್ಲಿ ಬುಜ್ಜು ಭಾಗಿಯಾಗಿದ್ದ ಎನ್ನಲಾಗಿದೆ. ಸ್ಟಾಲಿನ್ ಹತ್ಯೆ ಬಳಿಕ ಆತನ ಸಹಚರರು ಬುಜ್ಜು ಸಹೋದರ ವಿನೋದ್​​ನನ್ನು ಹತ್ಯೆಗೈದಿದ್ದರು. ಬಳಿಕ ಎರಡು ಕಡೆ ಒಂದೊಂದು ಹತ್ಯೆಯಾಗಿದೆ. ಹೀಗಾಗಿ ಇಬ್ಬರೂ ಸೈಲೆಂಟ್​ ಆಗಿರೋಣ ಎಂದು ಸಂಧಾನ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಈಗ ರೌಡಿ ಶೀಟರ್ ಬುಜ್ಜು ಹತ್ಯೆಯಾಗಿದೆ. ಹಳೆಯ ದ್ವೇಷ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಈ ಅಂಶಗಳನ್ನು ಗಮನಿಸಿದರೆ ರೌಡಿ ಡ್ಯಾನಿಯಲ್ ಸಹಚರರಿಂದಲೇ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಈ ಬಗ್ಗೆ ತನಿಖೆಯ ನಂತರವಷ್ಟೇ ಮಾಹಿತಿ ತಿಳಿದುಬರಬೇಕಿದೆ.

Comments are closed.