ಬೆಂಗಳೂರು: ಕೊರೋನಾ ವೈರಸ್ ಕಾರಣದಿಂದಾಗಿ ಏಪ್ರಿಲ್ ಅಥವಾ ಮೇ ನಲ್ಲಿ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಿಕೆಯಾಗಿ, ಇದೀಗ ಜೂನ್ 25ರಿಂದ ನಡೆಯಲಿದೆ. ಆದರೆ, ಕಂಟೇನ್ಮೆಂಟ್ ಜೋನ್ನಲ್ಲಿ ಇರುವ ವಿದ್ಯಾರ್ಥಿಗಳಿಗೆ ಎಲ್ಲ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ.
ಈ ಬಗ್ಗೆ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಕಂಟೇನ್ಮೆಂಟ್ ಜೋನ್ಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಇಲ್ಲ. ಸಪ್ಲಿಮೆಂಟರಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಇವರನ್ನು ಹೊಸದಾಗಿ ಪರೀಕ್ಷೆ ತೆಗೆದುಕೊಳ್ಳುತ್ತಿರುವವರು ಎಂದೇ ಪರಿಗಣಿಸಿ, ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಜೂನ್ 25ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಜುಲೈ 4ರವರೆಗೆ ನಡೆಯಲಿದೆ. ಬಾಕಿ ಉಳಿದಿದ್ದ ದ್ವಿತೀಯ ಪಿಯು ಇಂಗ್ಲಿಷ್ ಭಾಷೆಯ ಪರೀಕ್ಷೆಯೂ ಸಹ ಜೂನ್ 18ರಂದು ನಡೆಯಲಿದೆ.
Comments are closed.