ಕರ್ನಾಟಕ

ದರೋಡೆ ಮಾಡುತ್ತಿದ್ದ ಚಾಲಕಿ ಕಳ್ಳಿಯರ ಬಂಧನ

Pinterest LinkedIn Tumblr


ಬೆಂಗಳೂರು: ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಮಾಡುತ್ತಿದ್ದ ಚಾಲಕಿ ಕಳ್ಳರನ್ನು ಸಿಲಿಕಾನ್ ಸಿಟಿಯ ನಂದಿನಿ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತರನ್ನು ಸಜ್ಜಾದ್, ಶಾಜೀಯಾ, ಫಹಿಮಾ ಎಂದು ಗುರುತಿಸಲಾಗಿದೆ. ಇವರು ಯಾರು ಇಲ್ಲದ ಸಮಯ ನೋಡಿಕೊಂಡು ಒಬ್ಬಂಟಿಯಾಗಿ ಓಡಾಡುವವರನ್ನು ಟಾರ್ಗೆಟ್ ಮಾಡಿ ದರೋಡೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈಗ ಇವರನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಂದ ನಾಲ್ಕು ಲಕ್ಷ ಮೌಲ್ಯದ 80 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಈ ಮೂವರು ಸೇರಿಕೊಂಡು ಕಳೆದ ತಿಂಗಳು ಹಿದಾಯತ್ ಎಂಬವರ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ್ದರು. ಈ ಘಟನೆ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ಜಾಡು ಹಿಡಿದ ಪೊಲೀಸರು ಈ ಮೂವರನ್ನು ಜೈಲಿಗೆ ಕಳುಹಿಸಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಕೆ.ಆರ್.ಪುರ, ಬಸವನಗುಡಿ, ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿವೆ.

Comments are closed.