ಕರ್ನಾಟಕ

ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ; ಅಶೋಕ್ ಗಸ್ತಿ-ಈರಣ್ಣ ಕಡಾಡಿಗೆ ಬಿಜೆಪಿ ಟಿಕೆಟ್: ಕೋರೆ-ಕತ್ತಿಗೆ ಸಿಗದ ಟಿಕೆಟ್

Pinterest LinkedIn Tumblr

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದು, ಉತ್ತರ ಕರ್ನಾಟಕದ ಅಭ್ಯರ್ಥಿಗಳಿಗೆ ಮಣೆ ಹಾಕಿದೆ.

ಬಳ್ಳಾರಿ ಬಿಜೆಪಿ ವಿಭಾಗದ ಪ್ರಬಾರಿ ಆಗಿರುವ ಅಶೋಕ್ ಗಸ್ತಿ, ಬೆಳಗಾವಿ ಬಿಜೆಪಿ ವಿಭಾಗದ ಪ್ರಭಾರಿ ಈರಣ್ಣ ಕಡಾಡಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಜೂನ್ 19 ರಂದು ನಡೆಯುವ ನಾಲ್ಕು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿದೆ.

ರಾಯಚೂರಿನವರಾದ ಅಶೋಕ್ ಗಸ್ತಿ ಸವಿತಾ ಸಮಾಜಕ್ಕೆ ಸೇರಿದವರು. ಹಾಗೂ ಬೆಳಗಾವಿಯವರಾದ ಈರಣ್ಣ ಕಡಾಡಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ವಿಶೇಷ ಅಂದರೆ ಇವರಿಬ್ಬರು ಉತ್ತರ ಕರ್ನಾಟಕಕ್ಕೆ ಸೇರಿದವರು.

ರಾಜ್ಯ ಸಭೆ ಚುನಾವಣೆ ಟಿಕೆಟ್ ನ ಪ್ರಬಲ ಆಕಾಂಕ್ಷಿಗಳಾಗಿದ್ದ ಹಾಲಿ ಸದಸ್ಯ ಪ್ರಭಾಕರ ಕೋರೆ ಮತ್ತು ರಮೇಶ್ ಕತ್ತಿ ಮತ್ತು ಪ್ರಕಾಶ್ ಶೆಟ್ಟಿ ಅವರಿಗೆ ಟಿಕೆಟ್ ಕೈತಪ್ಪಿದೆ, ವಿಧಾನಸಭೆಯಲ್ಲಿ 117 ಶಾಸಕರ ಬಲ ಹೊಂದಿರುವ ಬಿಜೆಪಿ 2 ಸ್ಥಾನದಲ್ಲಿ ಸುಲಭವಾಗಿ ಜಯಗಳಿಸಲಿದೆ.

Comments are closed.