ಕರ್ನಾಟಕ

ಕೊರೋನಾ ಆತಂಕದಿಂದ ಖಿನ್ನತೆ; ಆತ್ಮಹತ್ಯೆಗೆ ಶರಣಾದ ಕೊಡಗಿನ ನಿವೃತ್ತ ಯೋಧ

Pinterest LinkedIn Tumblr


ಕೊಡಗು (ಜೂನ್ 11) : ಕೊರೋನಾ ಆತಂಕದಿಂದ ಕಳೆದ ಮೂರು ತಿಂಗಳಿಂದ ಮನೆಯಲ್ಲೇ ಇದ್ದ ನಿವೃತ್ತ ಯೋಧರೊಬ್ಬರು ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಚೋಣಕೆರೆಯಲ್ಲಿ ನಡೆದಿದೆ.

ಚೋಣಕೆರೆಯ 74 ವರ್ಷದ ನಿವೃತ್ತ ಯೋಧ ಉತ್ತಯ್ಯ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ತಮ್ಮ ಮನೆಯ ಮಲಗುವ ಕೋಣೆಯಲ್ಲೇ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಉತ್ತಯ್ಯ ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಈ ನಡುವೆ ಕೊರೋನಾ ಭಯದಿಂದ ಮನೆಯಲ್ಲೇ ಇದ್ದರು. ಹೀಗಾಗಿ ಮಾನಸಿಕ ಖಿನ್ನತೆಗೆ ಒಳಗಾದ ಅವರು ಮನೆಯಲ್ಲಿದ್ದ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಗುಂಡು ಹೊಡೆದುಕೊಂಡಿದ್ದರಿಂದ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಿಪಿಐ ದಿವಾಕರ್ ಮತ್ತು ನಾಪೋಕ್ಲು ಠಾಣೆ ಎಸ್ಐ ಕಿರಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.