ಬೆಂಗಳೂರು(ಜೂ.13): ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ 308 ಮಂದಿಗೆ ಹೊಸದಾಗಿ ಕೋವಿಡ್-19 ಸೋಂಕು ಪತ್ತೆಯಾಗಿದೆ. ಇದರ ಪರಿಣಾಮ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6,824ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ.
ಇನ್ನು, ರಾಜ್ಯ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ಒಟ್ಟು 6,824 ಪ್ರಕರಣಗಳ ಪೈಕಿ 3,648 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಪ್ರಸ್ತುತ 3,092 ಸಕ್ರಿಯ ಕೇಸುಗಳಿವೆ. ಇವರಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ ಕೋವಿಡ್-19 ಚಿಕಿತ್ಸೆ ನೀಡಲಾಗುತ್ತಿದೆ.
ಮಾರಕ ಕೊರೋನಾ ವೈರಸ್ ಮರಣಮೃದಂಗವೂ ಮುಂದುವರಿದಿದೆ. ಹೀಗಾಗಿಯೇ ಈ ಸೋಂಕಿಗೆ ಇಂದು ಮತ್ತೆ ಮೂವರು ಬಲಿಯಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.
Comments are closed.