ಕರ್ನಾಟಕ

ರಾಜ್ಯದಲ್ಲಿ ಕೊರೊನಾಗೆ ಮತ್ತೋರ್ವ ಪೊಲೀಸ್ ಬಲಿ

Pinterest LinkedIn Tumblr


ಬೆಂಗಳೂರು: ಮಹಾಮಾರಿ ಕೊರೊನಾ ಮರಣಮೃದಂಗ ಮುಂದುವರೆಸಿದ್ದು, ಇದೀಗ ಸೋಂಕಿಗೆ ರಾಜ್ಯದಲ್ಲಿ ಮತ್ತೋರ್ವ ಕೊರೊನಾ ವಾರಿಯರ್ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ.

ಇತ್ತೀಚಿಗಷ್ಟೇ ವಿವಿ ಪುರಂನ ಎಎಸ್ಐ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಶನಿವಾರ ಕಲಾಸಿಪಾಳ್ಯ ಪೊಲೀಸ್ ಠಾಣೆಯ ಮುಖ್ಯಪೇದೆಯೊಬ್ಬರು ಸೋಂಕಿಗೆ ಬಲಿಯಾಗಿದ್ದು, ಇಲಾಖೆಗೆ ಮತ್ತೊಂದು ಉಂಟಾಗಿದೆ.

ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 56 ವರ್ಷದ ಮುಖ್ಯಪೇದೆಯನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಅಲ್ಲದೇ, ಇದೇ ಠಾಣೆಯ ಒಟ್ಟು 9 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.

ಕೊರೊನಾ ದಿನೇ ದಿನೇ ಪೊಲೀಸರನ್ನು ಆವರಿಸಿಕೊಳ್ಳುತ್ತಿದ್ದು, ಬೆಂಗಳೂರಿನ ಪೊಲೀಸರನ್ನು ಬೆಚ್ಚಿಬಿಳಿಸಿದೆ.

Comments are closed.