ಬೆಂಗಳೂರು: ದಿನ ಕಳೆಯುತ್ತಿದ್ದಂತೆ ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿ ರುದ್ರ ನರ್ತನ ಶುರು ಮಾಡಿದ್ದು ಇಂದು ಸಹ ಹೊಸದಾಗಿ 107 ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಇಂದು ಒಂದೇ ದಿನ 322 ಮಂದಿಗೆ ಸೋಂಕು ತಗುಲಿದೆ.
ಇನ್ನು ರಾಜ್ಯದಲ್ಲಿ ಕೊರೋನಾಗೆ ಇಂದು 8 ಮಂದಿ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.
ಇಂದು ಹೊಸದಾಗಿ 322 ಪ್ರಕರಣಗಳು ವರದಿಯಾಗಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 9,721ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 6,004 ಮಂದಿ ಗುಣಮುಖರಾಗಿದ್ದು ಡಿಸ್ಚಾರ್ಜ್ ಆಗಿದ್ದಾರೆ.
3,563 ಕೊರೋನಾ ಸೋಂಕಿತರ ರಾಜ್ಯದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Comments are closed.