ಬೆಂಗಳೂರು(ಜು.19): ರಾಜ್ಯದಲ್ಲಿ ಮಾರಕ ಕೊರೋನಾ ಹಾವಳಿ ಮುಂದುವರೆದಿದೆ. ಇದರ ಪರಿಣಾಮ ಇಂದು 4,120 ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆಯೂ 63 ಸಾವಿರ ದಾಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ.
ಒಟ್ಟು, 63,772 ಮಂದಿ ಪೈಕಿ 23,065 ಮಂದಿಗೆ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ. ಸದ್ಯ 39,370 ಸಕ್ರಿಯ ಕೇಸುಗಳು ಮಾತ್ರ ಬಾಕಿ ಇವೆ. ಈ ಮಾರಕ ಕೊರೋನಾಗೆ ಇಂದು ಒಂದೇ ದಿನ 91 ಮಂದಿ ಅಸುನೀಗಿದ್ದಾರೆ. ಹೀಗಾಗಿ ರಾಜ್ಯದ ಕೋವಿಡ್-19 ಮೃತರ ಸಂಖ್ಯೆಯೂ 1331ಕ್ಕೆ ಏರಿಕೆಯಾಗಿದೆ.
ಇನ್ನು, ಬೆಂಗಳೂರುವೊಂದರಲ್ಲೇ 2,156 ಮಂದಿಗೆ ಕೊರೋನಾ ಬಂದಿದೆ. ಇದುವರೆಗೂ 24,316 ಕೊರೋನಾ ಪಾಸಿಟಿವ್ ಕೇಸುಗಳು ವರದಿಯಾಗಿವೆ. ಜತೆಗೆ ರಾಜಧಾನಿಯಲ್ಲಿ ಮಾತ್ರ ಮಾರಕ ಕೊರೋನಾಗೆ 36 ಮಂದಿ ಬಲಿಯಾಗಿದ್ದಾರೆ. ಹಾಗೆಯೇ ರಾಜ್ಯದಲ್ಲಿ ಇಂದು 1,290 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಲ್ಲಿ ಬೆಂಗಳೂರಿನ 253 ಕೋವಿಡ್-19 ರೋಗಿಗಳ ಇದ್ದಾರೆ.
ಭಾರತದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಎಂದಿನಂತೆಯೇ ಮುಂದುವರೆದಿದೆ. ಇದುವರೆಗೂ ದೇಶದಲ್ಲಿ ಸೋಂಕಿತರ ಸಂಖ್ಯೆ 10,77,618ಕ್ಕೆ ಏರಿಕೆಯಾಗಿದೆ. ಡೆಡ್ಲಿ ಕೊರೋನಾ ವೈರಸ್ನಿಂದ ಮೃತಪಟ್ಟವರ ಸಂಖ್ಯೆ 26,816 ಆಗಿದೆ.
ಹೀಗೆ ಕೊರೋನಾ ಸೋಂಕು ಮಿತಿಮೀರಿ ಹರಡುತ್ತಿರುವ ಕಾರಣ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯನ್ನು ಒಂದು ವಾರ ಕಾಲ ಲಾಕ್ಡೌನ್ ಮಾಡಲಾಗಿದೆ. ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಜುಲೈ 14ನೇ ತಾರೀಕು ಮಂಗಳವಾರ ರಾತ್ರಿ 8 ಗಂಟೆಯಿಂದಲೇ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ.
ಇದನ್ನೂ ಓದಿ: ‘ಕೋವಿಡ್-19, ಚೀನಾ ಗಡಿ ವಿವಾದ, ಜಿಡಿಪಿ ವಿಚಾರದಲ್ಲಿ ಸುಳ್ಳು ಹೇಳುತ್ತಿರುವ ಬಿಜೆಪಿ‘ – ರಾಹುಲ್ ಗಾಂಧಿಇನ್ನು, ರಾಜ್ಯದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಅಧಿಕೃತ ಆದೇಶ ಪ್ರತಿಯಲ್ಲಿ ಸರ್ಕಾರದ ಮಾರ್ಗ ಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕೊರೋನಾ ವೈರಸ್ ತಹಬದಿಗೆ ತರಲು ಈ ಲಾಕ್ಡೌನ್ ಸಂದರ್ಭದಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Comments are closed.