ಕರ್ನಾಟಕ

ಕೊರೋನಾಗೆ ಹೆದರಿ ಆಸ್ಪತ್ರೆಯಲ್ಲೆ ರೋಗಿ ಆತ್ಮಹತ್ಯೆ

Pinterest LinkedIn Tumblr


ಮಂಡ್ಯ: ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ.

ಕೋವಿಡ್-19 ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಬುಧವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಈ ಕುರಿತು ಪ್ರತಿಕ್ರಿಯಿಸಿ, ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದ ತೀವ್ರ ನೊಂದಿದ್ದ ಅವರು ಬುಧವಾರ ಮಧ್ಯರಾತ್ರಿ ಶೌಚಾಲಯಕ್ಕೆ ತೆರಳಿ, ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಎಂದರು.

ಇತರ ರೋಗಿಗಳು ಶೌಚಾಲಯಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ ಎಂದ ಅವರು, ಸರ್ಕಾರದ ಕೋವಿಡ್ ಕಾರ್ಯಸೂಚಿಯಂತೆ ಗುರುವಾರ ಬೆಳಿಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ತಿಳಿಸಿದ್ದಾರೆ.

Comments are closed.