ಮೈಸೂರು: ವಿಶ್ವವಿಖ್ಯಾತ ದಸರಾಗೆ ಅರಮನೆ ನಗರಿ ಸಿದ್ದಗೊಳ್ಳುತ್ತಿರುವ ವೇಳೆ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿಗೆ ಜವಾಬ್ದಾರಿ ಮಾಡಲಾಗಿದೆ.
ಕಳೆದ ಒಂದು ತಿಂಗಳ ಹಿಂದಷ್ಟೇ ಜಿಲ್ಲೆಗೆ ಆಗಮಿಸಿದ್ದ ಜಿಲ್ಲಾಧಿಕಾರಿ ಶರತ್ ಕುಮಾರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿರುವುದು ಇದಕ್ಕೆ ಒಂದು ಮಹತ್ವವಿದೆ.
ಇದರ ಜೊತೆಗೆ ಬೃಹತ್ ಬೆಂಗಳೂರು ವಿಶೇಷ ಆಯುಕ್ತರಾಗಿ(ಆರೋಗ್ಯ ಮತ್ತು ಐಟಿ) ಪಿ ರಾಜೇಂದ್ರ ಚೋಳನ್, ಬೃಹತ್ ಬೆಂಗಳೂರು ವಿಶೇಷ ಆಯುಕ್ತರಾಗಿ (ಎಸ್ಟೇಟ್) ಜೆ ಮಂಜುನಾಥ್, ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ಗೆ ನಿರ್ವಹಣಾ ನಿರ್ದೇಶಕರಾಗಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ವರ್ಗಾವಣೆ ಮಾಡಲಾಗಿದೆ.
ಹಾಗೇ ಕರ್ನಾಟಕ ಸಿಲ್ಕ್ ನಿರ್ವಹಣಾ ಮಂಡಳಿಗೆ ನಿರ್ವಹಣಾ ನಿರ್ದೇಶಕರಾಗಿ ಎಂಆರ್ ರವಿ ಹಾಗೂ ಪಂಚಾಯತ್ ರಾಜ್ ನಿರ್ದೇಶಕರಾಗಿ ಪಿ ಶಿವಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ .
2009ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಖಡಕ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರನ್ನು ವರ್ಗಾವಣೆ ಮಾಡಿ ಸಿದ್ದರಾಮಯ್ಯ ಸರ್ಕಾರ ಆದೇಶ ನೀಡಿತ್ತು. ಈ ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ರಾಜ್ಯ ಹೈಕೋರ್ಟ್ ಇತ್ಯರ್ಥಪಡಿಸಿ, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯುವಂತೆ ಆದೇಶಿಸಿತ್ತು.
Comments are closed.