ಮಂಡ್ಯ: ಮಗುವಿಗೆ ಊಟ ಮಾಡಿಸಿ ಕೈ ತೊಳೆಯಲು ತಾಯಿ ಹೋದ ವೇಳೆ ಮೂರು ವರ್ಷದ ಕಂದಮ್ಮ ಮಹಡಿಯ ಮೇಲಿಂದ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮೂರು ವರ್ಷದ ಪುತ್ರಿ ಧನುಶ್ರೀ ಮೃತ ದುರ್ದೈವಿ. ಶೃತಿ ತಮ್ಮ ಮಗಳು ಧನುಶ್ರೀಯನ್ನು ಆಟವಾಡಿಸಿಕೊಂಡು ಮಹಡಿ ಮನೆಯಲ್ಲಿನ ಮುಂಭಾಗ ಊಟ ಮಾಡಿಸಿದ್ದಾರೆ. ನಂತರ ಮಗುವನ್ನು ಬಿಟ್ಟು ಒಳಗೆ ಕೈ ತೊಳೆಯಲು ಹೋಗಿದ್ದಾರೆ.
ಈ ವೇಳೆ ಮಹಡಿಯ ಮೇಲಿನ ಸಂದಿಯಲ್ಲಿ ಮಗು ಇಣುಕಿ ನೋಡಲು ಹೋಗಿದ್ದು ಮುಗ್ಗರಿಸಿ ಕೆಳಗೆ ಬಿದ್ದಿದೆ. ಮೇಲಿಂದ ಬಿದ್ದ ರಭಸಕ್ಕೆ ಮಗುವಿನ ತಲೆಯ ಭಾಗಕ್ಕೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಕ್ಷಣ ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಸಿಗದೇ ಮಗು ಸಾವನ್ನಪ್ಪಿದೆ.
ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.