ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲಾ -ಕಾಲೇಜುಗಳ ಆರಂಭಕ್ಕೆ ಇನ್ನೂ ಒಂದು ತಿಂಗಳು ವಿಳಂಬವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಅಕ್ಟೋಬರ್ ಅಂತ್ಯದವರೆಗೂ ಸ್ಕೂಲ್ ಓಪನ್ ಮಾಡುವುದಿಲ್ಲವೆಂದು ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ ಶಾಲೆ ಆರಂಭ ಮಾಡದಿರಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಡೈರೆಕ್ಟರ್ ಡಾ.ಪಾಟೀಲ್ ಓಂ ಪ್ರಕಾಶ್ ಹೇಳಿದ್ದಾರೆ.
ಸದ್ಯ ಸ್ಕೂಲ್-ಕಾಲೇಜ್ ಓಪನ್ ಮಾಡೋ ಸ್ಥಿತಿ ರಾಜ್ಯದಲ್ಲಿ ಇಲ್ಲ. ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ರೂ ರಾಜ್ಯಗಳ ವಿವೇಚನೆಗೆ ಬಿಟ್ಟಿದೆ. ಪರಿಸ್ಥಿತಿ ಅವಲೋಕನ ಮಾಡಿ ಮುಂದಿನ ನಿರ್ಧಾರ ಮಾಡ್ತೇವೆ ಅಂತ ಪಾಟೀಲ್ ಓಂ ಪ್ರಕಾಶ್ ತಿಳಿಸಿದ್ದಾರೆ.
Comments are closed.