ಕರ್ನಾಟಕ

ಶೂಟಿಂಗ್ ವೇಳೆ ಎದೆ ನೋವು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಕೃಷ್ಣ ನಾಡಿಗ್ ವಿಧಿವಶ

Pinterest LinkedIn Tumblr

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ಕಲಾವಿದರಾಗಿದ್ದ ಕೃಷ್ಣ ನಾಡಿಗ್ ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಲೇಖಕರಾಗಿ, ವ್ಯವಸ್ಥಾಪಕರಾಗಿ, ನಟರಾಗಿದ್ದ ಕೃಷ್ಣ ನಾಡಿಗ್ ಅವರು ಶನಿವಾರ ಚಿತ್ರೀಕರಣದಲ್ಲಿ ತೊಡಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಸುಮಾರು 50 ವರ್ಷಗಳಷ್ಟು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಅವರ 60 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ, ಚಿತ್ರಕತೆ ಬರೆದು ನಿರ್ಮಾಣ ನಿರ್ವಹಿಸಿ ಖಾಸಗಿ ಸುದ್ದಿ ವಾಹಿನಿಯಲ್ಲಿ ಕರ್ನಾಟಕದ ಸಾಂಸ್ಕೃತಿಕ ಜಗತ್ತನ್ನು ಪರಿಚಯಿಸುತ್ತಿದ್ದರು. ಕನ್ನಡದ ಹಲವು ಧಾರವಾಹಿಗಳಲ್ಲಿ ಕೃಷ್ಣಮೂರ್ತಿ ನಾಡಿಗ ನಟಿಸಿದ್ದರು. ಪೈಲ್ವಾನ್ ಮೊದಲಾದ ಚಿತ್ರದಲ್ಲಿ ಬಣ್ಣ ಹಚ್ಚಿದ್ದರು.

ಹಿರಿಯ ಕಲಾವಿದನ ಅಗಲಿಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂದು ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

 

Comments are closed.