ಕರ್ನಾಟಕ

ಕಾಯಿನ್ ಹಾಕುವುದಾಗಿ ಹೆತ್ತವರ ಮುಂದೆಯೇ ನದಿಗೆ ಹಾರಿದ ಯುವತಿ

Pinterest LinkedIn Tumblr

ವಿಜಯಪುರ: ಸೇತುವೆ ಮೇಲಿಂದ ಭೀಮಾನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ವಿಜಯಪುರ ಮತ್ತು ಕಲಬುರಗಿ ಮಧ್ಯದ ಗೋಳ್ನೂರನಲ್ಲಿ ಯುವತಿ ಶವ ಪತ್ತೆಯಾಗಿದೆ.

ದೇವಣಗಾಂವ್ ಅಫಜಲಪುರ ಮಧ್ಯದ ಸೇತುವೆ ಮೇಲಿಂದ ಹಾರಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ನಿವಾಸಿ ಐಶ್ವರ್ಯ ಶ್ರೀಪಾಲ್ ಕಬ್ಬಿನ(20) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ.

ಕುಟುಂಬಸ್ಥರೊಂದಿಗೆ ಕಲಬುರಗಿ ಜಿಲ್ಲೆಯ ಗಾಣಗಾಪುರದ ದತ್ತಾತ್ರೆಯ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿದ್ದ ಅಕ್ಕನ ಮನೆಗೆ ತಾಯಿಯ ಜೊತೆಗೆ ಬಂದಿದ್ದರು. ನದಿಗೆ ಕಾಯಿನ್ ಹಾಕಲು ವಾಹನ ನಿಲ್ಲಿಸಿದ ವೇಳೆ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Comments are closed.