ಕರ್ನಾಟಕ

ಮಳವಳ್ಳಿ: ದೇವರ ಪ್ರಸಾದ ಸೇವಿಸಿ 75 ಮಂದಿ ಅಸ್ವಸ್ಥ

Pinterest LinkedIn Tumblr


ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದ ಗ್ರಾಮದ ಮಾರಮ್ಮ ದೇವರ ಪ್ರಸಾದ ಸೇವಿಸಿ 75ಕ್ಕೂ ಭಕ್ತರು ಅಸ್ವಸ್ಥರಾಗಿದ್ದಾರೆ.

ಅಸ್ವಸ್ಥಗೊಂಡವರನ್ನು ತಕ್ಷಣಕ್ಕೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಗ್ರಾಮಕ್ಕೆ ತಾಲೂಕು ಆರೋಗ್ಯಾಧಿಕಾರಿಗಳು, ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಪ್ರಸಾದ ಸೇವಿಸಿದವರ ಪರೀಕ್ಷೆ ನಡೆಸಿದ್ದು, ಚಿಕಿತ್ಸೆಗೆ ಮುಂದಾಗಿದ್ದಾರೆ.

ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರತಿ ಮಂಗಳವಾರ ವಿಶೇಷ ಪೂಜೆ ಬಳಿಕ ಸಂಜೆ ಪ್ರಸಾದ ನೀಡಲಾಗುತ್ತಿತ್ತು. ನಿನ್ನೆ ಸಂಜೆ ಕೂಡ ಇದೇ ರೀತಿ ಪ್ರಸಾದ ನೀಡಲಾಗಿದೆ. ನೂರಕ್ಕೂ ಹೆಚ್ಚು ಮಂದಿ ಪ್ರಸಾದ ಸೇವಿಸಿದ್ದರು. ಇದಾದ ಬಳಿಕ ಪ್ರಸಾದ ಸೇವಿಸಿದವರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ತಕ್ಷಣಕ್ಕೆ ತಾಲೂಕು ವೈದ್ಯಾಧಿಕಾರಿ ಆಗಮಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಗಂಭೀರಗೊಂಡವರನ್ನು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ದಾಖಲಿಸಲಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾವುದೇ ಅನಾಹುತ ಇಲ್ಲ ಎಂಬ ಮಾಹಿತಿ ತಿಳಿದು ಬಂದಿದೆ.

ಸ್ಥಳಕ್ಕೆ ತಹಶೀಲ್ದಾರ್​ ಕೆ. ಚಂದ್ರಮೌಳಿ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪೊಲೀಸ್​ ಪ್ರಕರಣ ದಾಖಲಾಗಿದೆ.

Comments are closed.