ಕರ್ನಾಟಕ

ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣದಲ್ಲಿ ರವಿ ಪೂಜಾರಿಗೆ ಜಾಮೀನು ನಿರಾಕರಣೆ

Pinterest LinkedIn Tumblr

ಬೆಂಗಳೂರು: ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ರವಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ ವಿಚಾರಣೆ ನಡೆಸಿದ್ದಾರೆ. ಇತರ ಪ್ರಕರಣಗಳಲ್ಲಿ ಅರ್ಜಿದಾರರನ್ನು ದೋಷಮುಕ್ತವಾಗಿಸಲಾಗಿದೆ ಎಂಬ ಕಾರಣಕ್ಕೆ ಆತ ದೋಷಿ ಅಲ್ಲ ಎಂದು ತೀರ್ಮಾನಿಸಲಾಗದು ಎಂದು ಸ್ಪಷ್ಟಪಡಿಸಿದ್ದಾರೆ.

ರವಿ ಪೂಜಾರಿ ವಿರುದ್ಧ ಹಲವು ಪ್ರಕರಣಗಳು ಬಾಕಿ ಇದ್ದು ಈ ವೇಳೆಯಲ್ಲಿ ಜಾಮೀನು ನೀಡಿದರೆ ತನಿಖೆಗೆ ಅಸಹಕಾರ ನೀಡುವ ಸಾಧ್ಯತೆಯಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Comments are closed.