ಕರ್ನಾಟಕ

ಕೊರೋನಾ ಮುಂಜಾಗೃತೆಯೊಂದಿಗೆ ಮತದಾನ ಮಾಡುವಂತೆ ನಟಿ ಅಮೂಲ್ಯ ಮನವಿ…!

Pinterest LinkedIn Tumblr

ಬೆಂಗಳೂರು: ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಕೊರೋನಾ ಮುನ್ನೆಚ್ಚರಿಕೆಯೊಂದಿಗೆ ಮತ ಚಲಾಯಿಸುವಂತೆ ನಟಿ ಅಮೂಲ್ಯ ಅವರು ಮನವಿ ಮಾಡಿದ್ದಾರೆ.

ತಮ್ಮ ಪತಿಯೊಂದಿಗೆ ನಟಿ ಅಮೂಲ್ಯ ಅವರು ರಾಜರಾಜೇಶ್ವರಿ ನಗರದಲ್ಲಿನ ಬಿಇಟಿ ವಾರ್ಡ್ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.

ಬಳಿಕ ಮಾತನಾಡಿದ ನಟಿ ಅಮೂಲ್ಯ, ಈ ಕ್ಷೇತ್ರದ ಎಲ್ಲ ಮತದಾರರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ, ಅದರಲ್ಲೂ ವಿಶೇಷವಾಗಿ ಕೊರೋನ ಮುನ್ನೆಚ್ಚರಿಕೆಯೊಂದಿಗೆ ಮತದಾನ ಮಾಡಬೇಕು ಎಂದು ನಟಿ ಮನವಿ ಮಾಡಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಎಲ್ಲಾ ಕಡೆ ಬಿಗಿ ಬಂದೋ ಬಸ್ತ್ ಮಾಡಲಾಗಿದೆ.

Comments are closed.