ಬೆಂಗಳೂರು: ರಾಜ್ಯದಲ್ಲಿ ಬಲವಂತ ಮತಾಂತರ ನಡೆಸುವವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸಿಟಿ ರವಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮದುವೆಗಾಗಿ ಬಲವಂತವಾಗಿ ಮತಾಂತರವಾಗುವುದನ್ನು ತಡೆಯುವ ಉದ್ದೇಶದಿಂದ ರಾಜ್ಯದಲ್ಲಿ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ. ಅಲಹಾಬಾದ್ ನ್ಯಾಯಾಲಯದ ತೀರ್ಪು ಉಲ್ಲೇಖಿಸಿ, ಟ್ವೀಟ್ ಮಾಡಿರುವ ಅವರು, ಮಹಿಳೆಯರ ಘನತೆಗೆ ಕುಂದು ಉಂಟಾಗುವ ಕಾರ್ಯ ನಡೆಸಿದರೆ ಸುಮ್ಮನಿರುವುದಿಲ್ಲ ಎಂದು ಇದೇ ವೇಳೆ ಎಚ್ಚರಿಸಿದ್ದಾರೆ.
ಅಲಹಾಬಾದ್ ಹೈ ಕೋರ್ಟ್ ಆದೇಶದಂತೆ ಮದುವೆಗಾಗಿ ಮಹಿಳೆಯರನ್ನು ಬಲವಂತದ ಮತಾಂತರಗೊಳಿಸುವುದನ್ನು ನಿಷೇಧಿಸಲು ಕಾನೂನನ್ನು ಜಾರಿಗೆ ತರಲಾಗುವುದು. ಜಿಹಾದಿಗಳು ನಮ್ಮ ಸಹೋದರಿಯರ ಘನತೆಯನ್ನು ಮರೆಮಾಚಿದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಯಾವುದೇ ಮತಾಂತರದ ಕೃತ್ಯದಲ್ಲಿ ಭಾಗಿಯಾದವರು ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದಿದ್ದಾರೆ.
ಮದುವೆ ಕಾರಣದಿಂದಾಗಿ ಧರ್ಮ ಬಯಾಯಿಸಿಕೊಳ್ಳುವುದು ಮಾನ್ಯವಲ್ಲ ಎಂದು ಅಲಹಾಬಾದ್ ಕೋರ್ಟ್ ತಿಳಿಸಿದೆ. ನವ ದಂಪತಿಗಳ ಪ್ರಕರಣವೊಂದರಲ್ಲಿ ಈ ಹೇಳಿಕೆ ನೀಡಿದ್ದು, ಅವರ ಅರ್ಜಿ ವಜಾಗೊಳಿಸಲಾಗಿದೆ. ಅಂತರ್ ಧರ್ಮಿಯ ಮದುವೆಯಿಂದ ತೊಡಗು ಉಂಟಾಗಬಹುದು ಎಂದು ಪೊಲೀಸರಿಗೆ ನಿರ್ದೇಶಿಸಲು ಯುವತಿಯ ತಂದೆ ನ್ಯಾಯಾಲಯ ಮೊರೆ ಹೋಗಿದ್ದರು.
ಬಲಪಂಥೀಯ ಗುಂಪುಗಳ ಪ್ರಕಾರ ‘ಲವ್ ಜಿಹಾದ್’ ಎಂಬುದು ಪಿತೂರಿಯಾಗಿದೆ. ಮುಸ್ಲಿಂ ಸಮುದಾಯಕ್ಕೆ ಮಹಿಳೆಯರನ್ನು ಮತಾಂತರಗೊಳಿಸುವ ಉದ್ದೇಶದಿಂದ ತಮ್ಮ ನಿಜ ವ್ಯಕ್ತಿತ್ವ ಮರೆಮಾಚಿ ಅವರನ್ನು ಕೆಲವು ಯುವಕರು ಮದುವೆಯಾಗುತ್ತಾರೆ ಎನ್ನಲಾಗಿದೆ.