ಕರ್ನಾಟಕ

ಉಪಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆಯಲ್ಲಿ ಕಮಲ ಪಾಳಯದ ನಾಯಕರಿಂದ ಸಿಹಿ ಹಂಚಿ ಸಂಭ್ರಮ

Pinterest LinkedIn Tumblr

ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾದಲ್ಲಿ ಬಿಜೆಪಿ ಬಹುತೇಕ ಜಯಗಳಿಸಿದ್ದು, ಘೋಷಣೆ ಮಾತ್ರ ಬಾಕಿಯಿದ್ದು, ಬಿಜೆಪಿ ಒಳಗೆ ಸಂಭ್ರಮ ಮನೆ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ನಾಯಕರು ತೆರಳಿ ಸಿಹಿ ಹಂಚುತ್ತಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಜಯಗಳಿದ್ದು, ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹಾಗು ಟಿಬಿ ಜಯಚಂದ್ರ ಸೋಲನ್ನು ಕಂಡಿದ್ದು, ಕಾಂಗ್ರೆಸ್ ತೀವ್ರ ಮುಖ ಭಂಗ ಅನುಭವಿಸಿದೆ.

ಈ ನಡುವೆ ಎರಡೂ ಕ್ಷೇತ್ರದಲ್ಲೂ ಗೆಲುವಿನ ಹಿನ್ನೆಲೆಯಲ್ಲಿ ರಾಜ್ಯದ ಕಮಲ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಗೆಲುವಿನ ಹಂತ ತಲುಪಿರುವ ಹಿನ್ನೆಲೆಯಲ್ಲಿ ಸಚಿವ ಬಿ ಶ್ರೀರಾಮುಲು, ಆರ್.ಅಶೋಕ, ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿಯ ಇತರೆ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಸಿಹಿ ಹಂಚಿ, ಸಂಭ್ರಮ ಆಚರಿಸುತ್ತಿದ್ದಾರೆ.

Comments are closed.