ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಿಹಿ ಸುದ್ದಿ ನೀಡಿದ್ದಾರೆ. ಇನ್ನೂ ಎರಡು ಮೂರು ದಿನಗಳಲ್ಲಿಯೇ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.
ನಗರದಲ್ಲಿ ಉಪ ಚುನಾವಣೆಯ ಗೆಲುವಿನ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, ನಾವು ಉಪ ಚುನಾವಣೆಯಲ್ಲಿ ಜನರಿಗೆ ಕೊಟ್ಟಿರುವಂತ ಭರವಸೆಯನ್ನು ಈಡೇರಿಸುತ್ತೇವೆ. 2 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿಯೇ ತೋರಿಸುತ್ತೇವೆ. ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸಿದಂತ ಮತದಾರರಿಗೆ ಧನ್ಯವಾದಗಳನ್ನು ತಿಳಿಸಿದರು.
ಇನ್ನೂ ಮುಂದುವರೆದು ಮಾತನಾಡಿದ ಅವರು, ನಾಳೆ ಅಥವಾ ನಾಡಿದ್ದು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿದ್ದೇನೆ. ಬಿಜೆಪಿ ಹೈಕಮಾಂಡ್ ಭೇಟಿಯ ಬಳಿಕ, 2-3 ದಿನಗಳಲ್ಲಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಈ ಮೂಲಕ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ‘ಗುಡ್ ನ್ಯೂಸ್’ ನೀಡಿದ್ದಾರೆ.
Comments are closed.