ಕರ್ನಾಟಕ

ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು- ಶಿರಸಿ ಯುವಕ ಎಎನ್ಐ ವಶಕ್ಕೆ

Pinterest LinkedIn Tumblr

ಉತ್ತರಕನ್ನಡ: ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದಡಿ ಉತ್ತರಕನ್ನಡ ಶಿರಸಿ ಮೂಲದ ಯುವಕನನ್ನು ಎಎನ್ಐ ತಂಡ ಬಂಧಿಸಿದೆ.

(ಸಾಂದರ್ಭಿಕ ಚಿತ್ರ)

ಸಯ್ಯದ್ ಇದ್ರಿಸ್ ಸಾಬ್ ಮುನ್ನಾ ಎನ್ನುವವ ಬಂಧಿತ ಆರೋಪಿ. ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಪಶ್ಚಿಮ ಬಂಗಾಳ ವಿಭಾಗದ ತಂಡ ಬುಧವಾರ ನಸುಕಿನ ಜಾವ ಯುವಕನನ್ನು ಬಂಧಿಸಿ, ವಿಚಾರಣೆಗೆ ಕರೆದೊಯ್ದಿದೆ. ಈತ ಪಾಕಿಸ್ತಾನದಿಂದ ಕಾರ್ಯನಿರ್ವಹಿಸಿದ ಉಗ್ರ ಸಂಘಟನೆಯೊಂದರ ಸದಸ್ಯರೊಂದಿಗೆ ದೂರವಾಣಿ ಸಂಪರ್ಕ ಹೊಂದಿದ್ದ. ಅಲ್ಲದೆ ನಿರಂತರ ವಾಟ್ಸಾಪ್ ಚಾಟಿಂಗ್ ಕೂಡ ನಡೆಸಿದ್ದ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಕಳೆದ ತಿಂಗಳು ಎರಡು ಬಾರಿ ಯುವಕನ ವಿಚಾರಣೆ ನಡೆಸಿದ್ದರು. ಕಳೆದ ಒಂದು ತಿಂಗಳ‌ ಹಿಂದಷ್ಟೆ ಎನ್.ಐ.ಎ ತಂಡ ಶಿರಸಿ ಯಲ್ಲಿ ಬೀಡು ಬಿಟ್ಟಿತ್ತು. ಇಲ್ಲಿನ ಸೈಯದ್ ನನ್ನು ಕೂಡಾ ತೀವ್ರ ವಿಚಾರಣೆ ನಡೆಸಿತ್ತು.

ಉತ್ತರ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಶಿವಪ್ರಕಾಶ್ ದೇವರಾಜು ಯುವಕನ ಬಂಧನದ ಬಗ್ಗೆ ಖಚಿತ ಪಡಿಸಿದ್ದು ಬಂಧನ ಕಾರ್ಯಾಚರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೋಲಿಸರು ಸಹಕರಿಸಿದ್ದಾಗಿ ಹೇಳಿದ್ದಾರೆ.

Comments are closed.