ಕರ್ನಾಟಕ

ತನ್ನ ಮೂರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ

Pinterest LinkedIn Tumblr


ಬೆಂಗಳೂರು:. ಆ ತಂದೆಗೆ ಅದೇನು ಸಮಸ್ಯೆ ಇತ್ತೋ ಗೊತ್ತಿಲ್ಲ. ತನ್ನ 3 ಮೂರು ಮಕ್ಕಳನ್ನು ನೇಣಿಗೆ ಹಾಕಿ ತಾನೂ ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ.

ಇದು ಘೋರ ಕೃತ್ಯ ನಡೆದಿರುವುದು ಬೆಂಗಳೂರಿನ ಮೈಕೋ ಲೇಔಟ್ ನ ರಮಣಶ್ರೀ ಎನ್ ಕ್ಲೇವ್ ನಲ್ಲಿ. ಈ ಅಪಾರ್ಟಮೆಂಟ್ ನ ಸೆಕ್ಯುರಿಟಿ ಗಾರ್ಡ್ ಆಗಿದ್ದ ಜನಕರಾಜ್ ಬಿಸ್ತಾ (32) ಈ ಕೃತ್ಯ ಎಸಗಿದ ಅಪರಾಧಿ. ಬೆಳಿಗ್ಗೆಯಿಂದ ಹೊರಗಡೆ ಎಲ್ಲಾ ಓಡಾಡಿದ ಜನಕರಾಜ್ 11.30 ರ ಸುಮಾರಿಗೆ ತನ್ನ ಮೂವರು ಮಕ್ಕಳಾದ ಸರಸ್ವತಿ (14) ಹೇಮಾವತಿ(9) ಹಾಗೂ ರಾಜ್ ಕುಮಾರ್ (3) ನೇಣಿಗೆ ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಲ್ವರ ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮೈ ಕೋ ಲೆಔಟ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೀವನದಲ್ಲಿ ಜಿಗುಪ್ಸೆ ಬಂದು ಅತ್ಮಹತ್ಯೆ ಮಾಡಿಕೊಂಡಿರು ಬಗ್ಗೆ ಸಂಶಯ ವ್ಯಕ್ತವಾಗಿದೆ. ಎರಡು ತಿಂಗಳ ಹಿಂದೆ ಜನಕರಾಜ್ ಪತ್ನಿ ನಂದಾದೇವಿ ಸಹ ಆತ್ಮಹತ್ಯೆಗೆ ಶರಣಾಗಿದ್ದಳು.. ಮಕ್ಕಳನ್ನು ನೋಡಿಕೊಳ್ಳಲಾರದೇ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಜನಕರಾಜ್.. ಮಕ್ಕಳನ್ನು ನೇಣಿಗೆ ಹಾಕಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Comments are closed.