ಕರ್ನಾಟಕ

ದೀಪಾವಳಿಗೆ ಮಳೆ ಅಡ್ಡಿ; ಇಂದಿನಿಂದ 3 ದಿನ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ

Pinterest LinkedIn Tumblr

ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ಸಂಜೆ ಮಳೆಯಾದ್ದರಿಂದ ದೀಪಾವಳಿ ಸಂಭ್ರಮಕ್ಕೆ ಅಡ್ಡಿಯಾಗಿದೆ. ಇಂದಿನಿಂದ 3 ದಿನ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಜೆ 5 ಗಂಟೆಯಿಂದ ಮಳೆ ಆರಂಭವಾಗಿ ಸತತವಾಗಿ ಒಂದು ಗಂಟೆಯವರೆಗೆ ಸುರಿಯಿತು. ಇದರಿಂದ ವಾಹನ ಸವಾರರಿಗೆ ಹಾಗೂ ಸಂಜೆ ಮನೆಯಿಂದ ಹೊರಗೆ ಹೋಗಿದ್ದವರಿಗೆ ಕಿರಿಕಿರಿ ಉಂಟಾಯಿತು. ಇಳಿ ಸಂಜೆಯ ಜಿಟಿಜಿಟಿ ಮಳೆಯಲ್ಲಿ ಸಿಲುಕಿಕೊಂಡ ದ್ವಿಚಕ್ರ ವಾಹನ ಸವಾರರು, ಪಾದಚಾರಿಗಳು ಕಿರಿಕಿರಿ ಅನುಭವಿಸಿದರು.

ಇಂದಿನಿಂದ ರಾಜ್ಯದಲ್ಲಿ 3 ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸ್ಪೆಸಿಫಿಕ್ ಮಹಾಸಾಗರದಲ್ಲಿ ‘ಲಾ ನಿನಾ’ ಏರಿಳಿತದಿಂದ ಚಳಿಯೂ ಹೆಚ್ಚುವ ಸಂಭವವಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನಾ ವಿಭಾಗದ ನಿರ್ದೇಶಕ ಚನ್ನಬಸವ ಅವರು ನ್ಯೂಸ್ 18 ಕನ್ನಡಕ್ಕೆ ತಿಳಿಸಿದ್ದಾರೆ.

Comments are closed.