ಕರ್ನಾಟಕ

ಹಿರಿಯ ರಂಗಕರ್ಮಿ, ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಡಾ.ಟಿ.ಬಿ. ಸೊಲಬಕ್ಕನವರ ಇನ್ನಿಲ್ಲ

Pinterest LinkedIn Tumblr

ಬೆಂಗಳೂರು: ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಹಾಗೂ ಗೊಟಗೋಡಿಯ ರಾಕ್ ಗಾರ್ಡನ್ ರೂವಾರಿ, ಹಿರಿಯ ರಂಗಕರ್ಮಿ ಡಾ.ಟಿ.ಬಿ. ಸೊಲಬಕ್ಕನವರ (73) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸೊಲಬಕ್ಕನವರ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ಸುಮಾರಿಗೆ ನಿಧನರಾಗಿದ್ದಾರೆ.

ದೊಡ್ಡಾಟ, ಶಿಲ್ಪ ಕಲಾಕೃತಿಗಳಲ್ಲಿನ ಇವರ ಸೃಜನಶೀಲ ಪ್ರತಿಭೆ ಹಾಗೂ ಕೊಡುಗೆ ಪರಿಣಗಣಿಸಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಇವರಿಗೆ ಗೌರವ ಡಾಕ್ಟರೇಟ್‌ ಪದವಿ ನೀಡಿ ಗೌರವಿಸಿದೆ. ಮೃತರು ಪತ್ನಿ ಸಾವಿತ್ರೆಮ್ಮ, ಪುತ್ರಿ ವೇದಾರಾಣಿ, ಪುತ್ರ ರಾಜಹರ್ಷ ಹಾಗೂ ಅಳಿಯ ಉದ್ಯಮಿ ಪ್ರಕಾಶ ದಾಸನೂರ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ರಾಕ್ ಗಾರ್ಡನ್ ಬಳಿಯ ನ್ಯೂ ವರ್ಕ್ ಶಾಪ್ ಬಳಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

Comments are closed.