ಕರ್ನಾಟಕ

ಡಿಕೆಶಿ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥದಲ್ಲಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಭಾಗಿ

Pinterest LinkedIn Tumblr

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫೀ ಡೇ ಮಾಲೀಕ ದಿ.ಸಿದ್ದಾರ್ಥ್ ಹೆಗ್ಡೆ ಪುತ್ರ ಅಮರ್ತ್ಯ ಹೆಗ್ಡೆ ಅವರ ನಿಶ್ಚಿತಾರ್ಥ ಸಮಾರಂಭ ಇಂದು ನೆರವೇರಿತು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರಾದ ಡಾ ಕೆ ಸುಧಾಕರ್, ಆರ್. ಅಶೋಕ್, ವಿ.ಸೋಮಣ್ಣ ಸೇರಿದಂತೆ ಹಲವು ಗಣ್ಯರು ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಎರಡೂ ಕುಟುಂಬಗಳ ಆಪ್ತ ಬಂಧುಗಳು, ಸ್ನೇಹಿತರು ಇಂದಿನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ತಂದೆ ಸಿದ್ಧಾರ್ಥ್ ಹೆಗ್ಡೆ ನಿಧನದ ನಂತರ ಕಾಫಿ ಡೇ ಉದ್ಯಮವನ್ನು ಅಮರ್ತ್ಯ ಹೆಗ್ಡೆ ನೋಡಿಕೊಳ್ಳುತ್ತಿದ್ದು, ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ತಮ್ಮ ತಂದೆ ಸ್ಥಾಪಿಸಿರುವ ಎಂಜಿನಿಯರಿಂಗ್ ಕಾಲೇಜು ಗ್ಲೋಬಲ್ ಟೆಕ್ನಾಲಜಿ ಅಕಾಡೆಮಿಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

Comments are closed.